Saturday, May 4, 2024

ನೇಹ ಕೊಲೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ ಫಯಾಜ್​!

ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ.

ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು,“ಅವಳು ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ” ಎಂದು ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಹೇಳಿದ್ದಾನೆ.

ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದ, ನೋ ಎಂದಿದ್ದಕ್ಕೆ ಕೊಂದೇ ಬಿಟ್ಟ : CCTVಯಲ್ಲಿ ಭಯಾನಕ ದೃಶ್ಯ ಸೆರೆ

ಅಲ್ಲದೆ ಅವತ್ತು ಏನೆಲ್ಲ ಘಟನೆ ನಡೆಯಿತು ಎಂಬುವುದನ್ನು ವಿವರಿಸಿದ್ದಾನೆ. ಘಟನೆ ನಡೆಯುವುದಕ್ಕೂ ಮುಂಚೆಯೇ ಕಾಲೇಜು ಬಿಟ್ಟಿದ್ದೆ. ಒಂದು ವಾರದ ಹಿಂದೆ ಕಾಲೇಜ್​ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡಿ, ಹೊರಟು ಹೋದಳು”.

ಏಪ್ರಿಲ್​ 18 ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬಂದಿದ್ದಳು. ನಾನು ಮತ್ತೆ ಅಂದು ಕಾಲೇಜಿಗೆ ಹೋದೆ. ಪರೀಕ್ಷೆ ಮುಗಿಯುವವರೆಗೂ ಕಾದೆ. ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಹತ್ತು ಬಾರಿ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.

RELATED ARTICLES

Related Articles

TRENDING ARTICLES