Friday, May 3, 2024

ಇಂದು ಕೋಲಾರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಗೌತಮ್​ ಪರ ಪ್ರಚಾರ

ಕೋಲಾರ : ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಏರುತ್ತಿದ್ದು ರಾಜ್ಯದ ಎಲ್ಲೆಡೆ ಬಿರುಸಿನ ಪ್ರಚಾರ ನಡೆಯುತ್ತಿದೆ. ಪ್ರಮುಖ ರಾಜಕೀಯ ಪಕ್ಷಗಳು  ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕೇಂದ್ರದಿಂದ ಸ್ಟಾರ್ ಕ್ಯಾಂಪೇನರ್​ ಗಳನ್ನು ಕರೆಸಿ ಪ್ರಚಾರ ನಡೆಸುತ್ತಿದ್ದಾರೆ.

ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಕೋಲಾರದ ಬಂಗಾರಪೇಟೆ ನಗರದಲ್ಲಿ ಪ್ರಜಾಧ್ವನಿ 2 ಪ್ರಚಾರ ಸಭೆ ನಡೆಸಲಿದ್ದಾರೆ.   ಇಂದು ಮಧ್ಯಾಹ್ನ 2 ಗಂಟೆಯಿಂದ 3.30 ರವರೆಗೂ ಶಿಡ್ಲಘಟ್ಟದಲ್ಲಿ ಅಭ್ಯರ್ಥಿ ಗೌತಮ್ ಪರವಾಗಿ ಸಿಎಂ ಪ್ರಚಾರ ನಡೆಸಲಿದ್ದು ಸಚಿವ ಕೆ.ಹೆಚ್​ ಮುನಿಯಪ್ಪ ಮತ್ತು ಮುಖಂಡರು ಸಾಥ್​ ನೀಡಲಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​, ಕುಮಾರಸ್ವಾಮಿ, ವಿಜಯೇಂದ್ರ ವಿರುದ್ದ FIR ದಾಖಲು

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಟಿಕೆಟ್​ಗಾಗಿ ಕೋಲಾರದ ಮಾಜಿ ಸಂಸದ ಹಾಗು ಹಾಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್​ ಮುನಿಯಪ್ಪ  ಮತ್ತು ಮಾಜಿ ಸಚಿವ ರಮೇಶ್​ ಕುಮಾರ್ ತಂಡದ​ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು ಅಂತಿಮವಾಗಿ ಕೆ.ವಿ.ಗೌತಮ್, ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಭಾರಿ ಕಣಕ್ಕೆ ಇಳಿಯಲಿದ್ದಾರೆ.

RELATED ARTICLES

Related Articles

TRENDING ARTICLES