ಕೋಲಾರ : ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಏರುತ್ತಿದ್ದು ರಾಜ್ಯದ ಎಲ್ಲೆಡೆ ಬಿರುಸಿನ ಪ್ರಚಾರ ನಡೆಯುತ್ತಿದೆ. ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕೇಂದ್ರದಿಂದ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸಿ ಪ್ರಚಾರ ನಡೆಸುತ್ತಿದ್ದಾರೆ.
ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಕೋಲಾರದ ಬಂಗಾರಪೇಟೆ ನಗರದಲ್ಲಿ ಪ್ರಜಾಧ್ವನಿ 2 ಪ್ರಚಾರ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಯಿಂದ 3.30 ರವರೆಗೂ ಶಿಡ್ಲಘಟ್ಟದಲ್ಲಿ ಅಭ್ಯರ್ಥಿ ಗೌತಮ್ ಪರವಾಗಿ ಸಿಎಂ ಪ್ರಚಾರ ನಡೆಸಲಿದ್ದು ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಮುಖಂಡರು ಸಾಥ್ ನೀಡಲಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್, ಕುಮಾರಸ್ವಾಮಿ, ವಿಜಯೇಂದ್ರ ವಿರುದ್ದ FIR ದಾಖಲು
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಕೋಲಾರದ ಮಾಜಿ ಸಂಸದ ಹಾಗು ಹಾಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಮಾಜಿ ಸಚಿವ ರಮೇಶ್ ಕುಮಾರ್ ತಂಡದ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು ಅಂತಿಮವಾಗಿ ಕೆ.ವಿ.ಗೌತಮ್, ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಭಾರಿ ಕಣಕ್ಕೆ ಇಳಿಯಲಿದ್ದಾರೆ.