Saturday, May 4, 2024

ಕೆ.ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಭರ್ಜರಿ ಪ್ರಚಾರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಇಂದು ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಸುಮಾರು 13ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸೋ ಮೂಲಕ ಮತಯಾಚನೆ ಮಾಡಿದರು. ಕ್ಷೇತ್ರದ ಮಾರಗೌಡನಹಳ್ಳಿಯ ಬಸವೇಶ್ವರ ದೇವಸ್ಥಾನದಲ್ಲಿ ಮೊದಲಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದರು.

ನಂತರ ರೋಡ್ ಶೋ ನಡೆಸೋ ಮೂಲಕ ಪ್ರಚಾರ ನಡೆಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮತದಾರರಿಗೆ ಮನದಟ್ಟು ಮಾಡಿದ್ದಲ್ಲದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಇನ್ನು ಹಲವಾರು ಗ್ಯಾರಂಟಿಗಳು ಜಾರಿಗೊಳ್ಳುತ್ತವೆ. ಈ ಬಾರಿ ನನ್ನನ್ನ ಗೆಲ್ಲಿಸಿಕೊಡಿ ಮುಂದೆ ತಮ್ಮ ಸೇವೆ ಮಾಡಲು ಅನುವು ಮಾಡಿಕೊಡಿ ಎಂದು ಮನವಿ ಮಾಡಿದರು.

ಸ್ಟಾರ್ ಚಂದ್ರುಗೆ ಶಾಸಕ ರವಿಶಂಕರ್ ಸಾಥ್

ಇನ್ನು ಅಭ್ಯರ್ಥಿ ಸ್ಟಾರ್ ಚಂದ್ರುಗೆ ಸಾಥ್ ನೀಡಿದ ಸ್ಥಳೀಯ ಶಾಸಕ ಡಿ. ರವಿಶಂಕರ್, ಸ್ವಾಭಿಮಾನದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು. ಅಲ್ಲದೆ, ಜನತೆಗೆ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇ ಆದಲ್ಲಿ ಕೇಂದ್ರದ ಅನೇಕ ಯೋಜನೆಗಳು ತಲುಪುತ್ತವೆ. ನಾವು ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ನಮ್ಮ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಅರವು ಮೂಡಿಸಬೇಕು. ಅದಕ್ಕಾಗಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

13 ಗ್ರಾ.ಪಂ ವ್ಯಾಪ್ತಿಗಳಲ್ಲಿ ಬಿರುಸಿನ ಪ್ರಚಾರ

ಅಡಗೂರು, ಅರ್ಜುನಹಳ್ಳಿ, ಹೊಸ ಅಗ್ರಹಾರ, ಗಂಧನಹಳ್ಳಿ, ಹಂಪಾಪುರ, ಚೀರನಹಳ್ಳಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಷು ಗ್ರಾಮಗಳಲ್ಲಿ, ಸುಮಾರು 13 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ಟಾರ್ ಚಂದ್ರು ಬಿರುಸಿನ ಪ್ರಚಾರ ನಡೆಸಿದರು. ಒಟ್ಟಾರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಹೋದಲ್ಲೆಲ್ಲಾ ಅಭೂತಪೂರ್ವ ಸ್ವಾಗತ ಸಿಕ್ಕಿದೆ.

RELATED ARTICLES

Related Articles

TRENDING ARTICLES