ಶಿವಮೊಗ್ಗ : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ತುಂಬಾ ಹಗುರವಾಗಿ ಪರಿಗಣಿಸಿದೆ ಎಂದು ಸಂಸದ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಕರಣದ ತೀವ್ರತೆಯನ್ನು ಕಡಿಮೆ ಮಾಡಲು ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರೋಪಿ ಮನೆಗೆ ರಕ್ಷಣೆ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಿದೆ. ಪಠ್ಯ ಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಾಠ ಬದಲಿಸಿದರು. ತುಷ್ಠಿಕರಣಕ್ಕೆ ಕಾಂಗ್ರೆಸ್ ಮುಂದಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಜನರೇ ಪಾಠ ಕಳಿಸುತ್ತಾರೆ ಎಂದು ಚಾಟಿ ಬೀಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬಗ್ಗೆ ಅಸಹ್ಯ ಅನಿಸುತ್ತೆ
ಇಂದು ರೈಲಿನಲ್ಲಿ ಮತ ಕೇಳುವ ಮೂಲಕ ಪ್ರಚಾರ ಮಾಡಿದ್ದೇನೆ. ಫೀಲ್ಡ್ಗೆ ಹೋದಾಗ ಅನೇಕ ವಿಷಯಗಳು ತಿಳಿಯುತ್ತೆ. ಬಸ್ ನಿಲ್ದಾಣ, ಸಂತೆ ಮಾರುಕಟ್ಟೆಯಲ್ಲಿ ಪ್ರಚಾರ ಮಾಡುತ್ತೇನೆ. ಕಾಂಗ್ರೆಸ್ ಚಂಬೂ ಅಭಿಯಾನ ನೋಡಿದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಅಸಹ್ಯ ಅನಿಸುತ್ತೆ ಎಂದುಹೇಳಿದ್ದಾರೆ.
ಕೆಟ್ಟು ಹೆಸರು ತರಲು ಜಾಹೀರಾತು ಪ್ರಚಾರ
ಯುಪಿಎ ಸರ್ಕಾರ ದೇಶದ ಜನರಿಗೆ ಚಂಬೂ ಕೊಟ್ಟಿದೆ ಅಂತ ದೇವೇಗೌಡರು ಹೇಳಿದ್ದಾರೆ. ಏನಾದರೂ ಮಾಡಿ ಕೆಟ್ಟು ಹೆಸರು ತರಲು ಜಾಹೀರಾತು ಪ್ರಚಾರ ಮಾಡುತ್ತಿದ್ದಾರೆ. ಈ ಜಾಹೀರಾತಿಗೆ ಜನ ಪಾಠ ಕಳಿಸುತ್ತಾರೆ ಎಂದು ಬಿ.ವೈ. ರಾಘವೇಂದ್ರ ಆಕ್ರೋಶ ಹೊರಹಾಕಿದ್ದಾರೆ.