Saturday, May 4, 2024

KSRTC ಬಸ್​ ಹರಿದು ಕಾಲು ಕಳೆದುಕೊಂಡ ವೃದ್ದೆ

ಹಾವೇರಿ: ವೃದ್ದೆಯ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಹರಿದು ಕಾಲು ಕಳೆದುಕೊಂಡಿರುವ ಘಟನೆ ರಾಣೆಬೆನ್ನೂರು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ.

ಕಾಲು ಕಳೆದುಕೊಂಡವರು ಮುದೇನೂರು ಗ್ರಾಮದ 65 ವರ್ಷದ ವೃದ್ದ ಮಹಿಳೆ ಎಂದು ತಿಳಿದುಬಂದಿದೆ, ಇಂದು ಬೆಳಗ್ಗೆ ಜಿಲ್ಲೆಯ ರಾಣೆಬೆನ್ನೂರು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಭಾರಿ ಮಳೆ: ಲಾಡ್ಜ್ ಮೇಲಿಂದ ಬಿದ್ದು ವ್ಯಕ್ತಿ ಸಾವು!

ಅಪಘಾತ ಸಂಭವಿಸಿ ಅರ್ಧ ಗಂಟೆ ಕಳೆದರೂ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಗಳು ಬಾರದೆ ಇದ್ದದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ, ಬಳಿಕ ಅ್ಯಂಬ್ಯೂಲೆನ್ಸ್​ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯೂ ರಾಣೆಬೆನ್ನೂರು ಸಂಚಾರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

Related Articles

TRENDING ARTICLES