Tuesday, May 7, 2024

ಟಾಸ್ ಗೆದ್ದ MI ಬ್ಯಾಟಿಂಗ್ ಆಯ್ಕೆ : ಮುಂಬೈ ತಂಡದಿಂದ ಕನ್ನಡಿಗ ಔಟ್, ಚಾವ್ಲಾ ಇನ್

ಬೆಂಗಳೂರು : ರಾಜಸ್ಥಾನ್ ರಾಯಲ್ಸ್​ ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಐಪಿಎಲ್​ನ 38ನೇ ಪಂದ್ಯ ನಡೆಯುತ್ತಿದೆ.

ಪ್ರಸಕ್ತ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್​ 7 ಪಂದ್ಯಗಳನ್ನು ಆಡಿದ್ದು, 6 ಪಂದ್ಯ ಗೆದ್ದು ಒಂದು ಪಂದ್ಯ ಸೋತಿದೆ. ಮಾಜಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ 7 ಪಂದ್ಯಗಳನ್ನು ಆಡಿದ್ದು, 3 ಪಂದ್ಯ ಗೆದ್ದು 4 ಪಂದ್ಯ ಸೋತಿದೆ. ಆರ್​ಆರ್​ 12 ಅಂಕಗಳೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಮುಂಬೈ 7ನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್​ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ಬಲಿಷ್ಠವಾಗಿದೆ. ಹಾರ್ದಿಕ್ ಪಾಂಡ್ಯ ಪಡೆ ಕೂಡ ಬಲಿಷ್ಠ ಆಟಗಾರರನ್ನು ಹೊಂದಿದೆ. ಆದರೆ, ಸಂಕಷ್ಟದ ಸಮಯದಲ್ಲಿ ಆಟಗಾರರು ತಂಡದ ಕೈಹಿಡಿಯುತ್ತಿಲ್ಲ.

ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನವನ್ನು ಉಳಿಸಿಕೊಳ್ಳಲು ಇಂದು ತವರು ಅಂಗಳದಲ್ಲಿ ತೀವ್ರ ಪೈಪೋಟಿ ನೀಡಲಿದೆ. ಇತ್ತ, ಮುಂಬೈ ಪ್ಲೇಆಫ್​ ಕನಸು ಜೀವಂತವಾಗಿರಬೇಕೆಂದರೆ ಇಂದು ಮುಂಬೈ ಗೆಲ್ಲಬೇಕಿದೆ. ಆದರೆ, ತವರು ಅಂಗಳದಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡವನ್ನು ಮಣಿಸುವುದು ಕಷ್ಟಸಾಧ್ಯ.

ಮುಂಬೈ ಇಂಡಿಯನ್ಸ್

ಇಶಾನ್ ಕಿಶನ್ (ವಿ.ಕೀ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ, ಪಿಯೂಷ್ ಚಾವ್ಲಾ

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಆರ್. ಅಶ್ವಿನ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಯುಜ್ವೇಂದ್ರ ಚಹಾಲ್

RELATED ARTICLES

Related Articles

TRENDING ARTICLES