Friday, May 3, 2024

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಮಹಿಳೆಯರು ಗಂಡನನ್ನ ಕಳೆದುಕೊಳ್ತಾರೆ : ಯತೀಂದ್ರ ವಿವಾದಾತ್ಮಕ ಹೇಳಿಕೆ

ಮೈಸೂರು : ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಧರ್ಮದ ತಾಯಂದಿರು ಗಂಡ ಹಾಗೂ ಮಕ್ಕಳನ್ನ ಕಳೆದುಕೊಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷ ಆಡಳಿತ ನಡೆಸಿವೆ. ಹಿಂದುಗಳಿಗೆ ಅನ್ಯಾಯ ಆಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲ ಮಹಿಳೆಯರ ಮಂಗಳ ಸೂತ್ರ ಮಾತ್ರ ಅಲ್ಲ, ತಮ್ಮ ಗಂಡಂದಿರು ಹಾಗೂ ತಮ್ಮ ಮಕ್ಕಳನ್ನ ಕಳೆದುಕೊಳ್ಳುತ್ತಾರೆ. ಬಿಜೆಪಿ ಕೋಮುಗಲಾಭೆ, ದೊಂಬಿ ಮಾಡಿ ಅವ್ರ ಮಕ್ಕಳನ್ನ ಸಾಯುವಂತೆ ಮಾಡ್ತಾರೆ ಎಂದು ಟೀಕಿಸಿದ್ದಾರೆ.

ಮಕ್ಕಳನ್ನು ಕೋಮು ಗಲಭೆಯಲ್ಲಿ ತೊಡಗಿಸಿತ್ತಾರೆ

ಅವರು ಅಧಿಕಾರಕ್ಕೆ ಬಂದರೆ ಒಬ್ಬರನ್ನೊಬ್ಬರು ಬಡಿದಾಡಿಕೊಳ್ತಾರೆ. ಸಮಾಜವನ್ನ ಅಧಃಪಥನಕ್ಕೆ ಹೋಗುವಂತೆ ಮಾಡ್ತಾರೆ. ಮಕ್ಕಳನ್ನು ಕೋಮು ಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಯಾಗಿ ಮಾಡುತ್ತಾರೆ. ಯಾವುದೇ ಪ್ರಜಾಪ್ರಭುತ್ವದಲ್ಲೂ ಈ ರೀತಿ ಮಾತನಾಡೋಲ್ಲ. ಮೋದಿ ಅವ್ರು ತುಚ್ಛವಾಗಿ ಮಾತನಾಡಿದ್ದಾರೆ. ಮತಿಯ ಭಾವನೆ ಕೆರಳಿಸುವ ರೀತಿ ಮೋದಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದೆಯೋ ಗೊತ್ತಿಲ್ಲ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES