ಕೋಟ : ಅತಿ ವೇಗ, ತಿಥಿ ಬೇಗ..! ಅವಸರವೇ ಅಪಘಾತಕ್ಕೆ ಕಾರಣ! ಹಿರಿಯರು ಈ ಮಾತನ್ನು ಸುಮ್ಮನೆ ಹೇಳಿಲ್ಲ. ಇದಕ್ಕೆ ಕೋಟದಲ್ಲಿ ಸಂಭವಿಸಿರುವ ಈ ಅಪಘಾತವೇ ಸಾಕ್ಷಿಯಾಗಿದೆ.
ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದೆ.
ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಬೈಕ್ ಸವಾರ ರಾತ್ರಿ 1.30 ರ ಸುಮಾರಿಗೆ ಸಾಸ್ತಾನದಿಂದ ಕೋಟ ಮಣೂರು ಕಡೆ ಬರುತ್ತಿದ್ದನು. ಈ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ಸವಾರ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತ ನಡೆದ ತಕ್ಷಣ ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿದರು. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆಹಾಕಿದ್ದಾರೆ. ಈ ಸಂಬಂಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.