Saturday, May 4, 2024

ಹುಬ್ಬಳ್ಳಿಯಲ್ಲಿ ಶಿಕ್ಷಕಿಯನ್ನೇ ಅಪಹರಿಸಿದ ಅನ್ಯಕೋಮಿನ ಯುವಕ

ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯನ್ನ ಕಿಡ್ನಾಪ್ ಮಾಡಿದ್ದಾನೆ.

ಯುವಕನೊಬ್ಬ ಅತಿಥಿ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಕಳಸ ಗ್ರಾಮದಲ್ಲಿ ನಡೆದಿದೆ.

ತನ್ನ ಮಗಳನ್ನು ಯುವಕನೋರ್ವ ಅಪಹರಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಸ್ವತಃ ಯುವತಿಯ ತಂದೆಯೇ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕುಂದಗೋಳ ತಾಲೂಕಿನ ಕಳಸ ಗ್ರಾಮದ ಅಕ್ಷತಾ ಕಳಸೂರು ಎಂಬಾಕೆಯೇ ಅಪಹರಣಕ್ಕೆ ಒಳಗಾಗಿರುವ ಅತಿಥಿ ಶಿಕ್ಷಕಿ. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಆರೋಪಿ ಸುಬಾನಿ ಮಾಬುಸಾಬ ದೊಡ್ಡಮನಿ ಎಂಬಾತ ಏಪ್ರಿಲ್ 18 ರಂದು ಯುವತಿಯನ್ನು ಯಾವುದೋ ದುರುದ್ದೇಶದಿಂದ ಅಪಹರಿಸಿದ್ದಾನೆ ಎಂದು ಯುವತಿ ತಂದೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜಾತ್ರೆಗೆ ಹೋಗಿದ್ದವಳು ಕಿಡ್ನಾಪ್

ಯುವತಿ ಅಕ್ಷತಾ ಕಳಸ ಗ್ರಾಮದ ಅಖಂಡೇಶ್ವರ ಜಾತ್ರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರಹೋಗಿದ್ದರು. ಈ ವೇಳೆ ಆರೋಪಿ ಸುಬಾನಿ ಮಾಬುಸಾಬ ದೊಡ್ಡಮನಿ ಕಳಸ ಗ್ರಾಮದ ಮಠದ ಹತ್ತಿರದಿಂದ ಅಪಹರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಕ್ಷತಾ ತಂದೆ ಮಗಳನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಗುಡಗೇರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಯುವತಿ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯುವತಿ ಪತ್ತೆಯಾದ ಬಳಿಕವೇ ಸತ್ಯಾಸತ್ಯತೆ ಹೊರಬೀಳಲಿದೆ.

RELATED ARTICLES

Related Articles

TRENDING ARTICLES