Monday, May 6, 2024

ಒಕ್ಕಲಿಗರು ಸಿಎಂ ಆಗೇ ಆಗ್ತಾರೆ : ಕೃಷ್ಣಬೈರೇಗೌಡ

ಚಿಕ್ಕಬಳ್ಳಾಪುರ : ಮತ್ತೊಮ್ಮೆ, ಮಗದೊಮ್ಮೆ ಹೇಳ್ತೀನಿ.. ಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರು ಮುಖ್ಯಮಂತ್ರಿ ಆಗೇ ಆಗ್ತಾರೆ ಎಂದು ಸಚಿವ ಕೃಷ್ಣಬೈರೇಗೌಡ ವಿಶ್ವಾಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎದುರಾಳಿ ಬಿಜೆಪಿ ಪಕ್ಷದಲ್ಲಿ ಯಾರು ಸಿಎಂ ಆಗ್ತಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯಲ್ಲಿ ಸಂಸದ ಪ್ರತಾಪ್ ಸಿಂಹ, ಡಿ.ವಿ. ಸದಾನಂದಗೌಡ, ಮಾಜಿ ಸಚಿವ ಸಿ.ಟಿ. ರವಿಗೆ ಟಿಕೆಟ್ ತಪ್ಪಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕೂಟದಲ್ಲಿ 6 ಜನ ಒಕ್ಕಲಿಗರಿಗೆ ಟಿಕೆಟ್ ಕೊಟ್ಟಿದ್ದಾರೆ‌. ಅದರಲ್ಲಿ ಒಂದೇ ಕುಟುಂಬಕ್ಕೆ 3 ಟಿಕೆಟ್ ಕೊಟ್ಟಿದ್ದಾರೆ. ನಾವು ಕಾಂಗ್ರೆಸ್ ಪಕ್ಷದಲ್ಲಿ 8 ಮಂದಿಗೆ ಒಕ್ಕಲಿಗರಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದು ಚಾಟಿ ಬಿಸಿದ್ದಾರೆ.

ಬಿಜೆಪಿಯವರು ತಮ್ಮ ಮನೆ ನೋಡಿಕೊಳ್ಳಲಿ

ಲೋಕಸಭಾ ಚುನಾವಣೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್​​ ಸಿಎಂ ಆಗ್ತಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮೊದಲು ಬಿಜೆಪಿಯವರು ತಮ್ಮ ಮನೆ ನೋಡಿಕೊಳ್ಳಲಿ ಎಂದು ಕುಟುಕಿದ್ದಾರೆ.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರಲ್ಲ

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣಾ ನಂತರ ಆರ್. ಅಶೋಕ್ ವಿಪಕ್ಷ ನಾಯಕರಾಗಿರಲ್ಲ. ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಉಳಿಯಲ್ಲ. ಶಾಸಕ ಯತ್ನಾಳ್ ಹೇಳಿಕೆಗೆ ನಾವ್ಯಾಕೆ ಕಿಮ್ಮತ್ತು ಕೊಡಬೇಕು? ಬಿಜೆಪಿಯವರ ಬಳಿ ಅಜೆಂಡಾನೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES