ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರ 95ನೇ ಜನ್ಮದಿನವನ್ನು ಅವರ ಅಭಿಮಾನಿಗಳು ರಾಜ್ಯದ ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆಯನ್ನು ಮಾಡಿಕೊಡಿದ್ದಾರೆ. ಕಂಠೀರವ ಸ್ಟುಡಿಯೋಗೆ ಇಂದು (ಏ.24) ಕುಟುಂಬಸ್ಥರು ಆಗಮಸಿ ಪೂಜೆ ಸಲ್ಲಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವು ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ನಡೆಯಲಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇಂದು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!
ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಲಿವೆ.