ಬೀದರ್: ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆಯಾಗಬೇಕು, ಘೋರ ಶಿಕ್ಷೆ ಕೊಡಲು ಪ್ರಯತ್ನ ಮಾಡಬೇಕೆಂದು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೇಹಾ ಹತ್ಯೆಯನ್ನ ಈಗಾಗಲೇ ಖಂಡಿಸಿದ್ದೇನೆ. ಈಗಲೂ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದೇವೆ. ವಿಶೇಷ ನ್ಯಾಯಲಯ ಮಾಡಬೇಕು ಅಂತ ಹೇಳಿದ್ದೇನೆ. ಅವರ ತಂದೆ ಜೊತೆಗೂ ಮಾತನಾಡಿದ್ದೇನೆ. ಆರೋಪಿಯನ್ನ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೆವೆಂದು ಹೇಳಿದ್ದೇನೆ. ಬಿಜೆಪಿಯವರು ಒಂದಾದರೂ ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ನೇಹಾ ತುಂಬಾ ಒಳ್ಳೆಯ ಹುಡುಗಿ : ರಾಜ್ಯದ ಜನರ ಕ್ಷಮೆಯಾಚಿಸಿದ ಫಯಾಜ್ ತಾಯಿ
ನೇಹಾ ಕೊಲೆಯಿಂದ ದೊಡ್ಡ ಅನ್ಯಾಯ
ನೇಹಾ ಪ್ರಕರಣವನ್ನ ಸಿಐಡಿ ತನಿಖೆ ನಡೆಸುತ್ತಿದೆ. ಮಾತನಾಡೋದಕ್ಕೆ ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ. ನೇಹಾ ಕೊಲೆಯಿಂದ ದೊಡ್ಡ ಅನ್ಯಾಯ ಆಗಿದೆ, ನಾನು ಈಗಾಗಲೇ ಖಂಡಿಸಿದ್ದೇನೆ. ನೇಹಾ ಕೊಲೆಯನ್ನ ಸರ್ಕಾರ ತೀವ್ರವಾಗಿ ಖಂಡಿಸುತ್ತೆ. ತಪ್ಪಿತಸ್ಥರಿಗೆ ಘೋರವಾದ ಶಿಕ್ಷೆ ಕೊಡಲು ಪ್ರಾಮಾಣಿಕ ಪ್ರಯತ್ನ ಸರ್ಕಾರ ಮಾಡಲಿದೆ. ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.