Sunday, May 5, 2024

ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ನಾವೆಲ್ಲರೂ ಬಯಸುತ್ತೇವೆ : ಸುರ್ಜೇವಾಲಾ

ಬೆಳಗಾವಿ : I.N.D.I.A ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬ ಬಿಜೆಪಿ ನಾಯಕರ ಪ್ರಶ್ನೆಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಈ ಹೋರಾಟ ಭಾರತೀಯ ಜನರ ಜೀವನದ್ದಾಗಿದೆ. ರಾಹುಲ್ ಗಾಂಧಿ ಪ್ರಧಾನಿಯಾಗಲಿ ಅಂತ ನಾವೆಲ್ಲರೂ ಬಯಸುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಡಿಎನ್ಎ ಒಬಿಸಿ, ಎಸ್ಸಿ, ಎಸ್ಟಿ ವಿರೋಧ ಮಾಡೋದು. ಪ್ರಧಾನಿ ಮೋದಿ ಸರ್ಕಾರ ಸಂವಿಧಾನ ಮುಗಿಸುವ ಕೆಲಸ ಮಾಡುತ್ತದೆ. ನೇಹಾ ಹತ್ಯೆ ದಾಖಲಿಸಿತು, ಬಿಜೆಪಿಯವರು ಹೆಣೆದ ಮೇಲೆ ರಾಜಕೀಯ ಮಾಡುತ್ತಿದೆ. ಬಿಜೆಪಿಯವರಿಗೆ ನಾಚಿಗೆ ಆಗಬೇಕು. ಆರೋಪಿ ಯಾವುದೇ ಸಮುದಾಯ ಆದ್ರೂ ಗಲ್ಲು ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನೀವೆಲ್ಲಾ ನೀರಲ್ಲಿ ಮುಳುಗಿ ಸಾಯಿರಿ

ಈಗಾಗಲೇ ನಮ್ಮ ಸರ್ಕಾರ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ವಿಶೇಷ ಕೋರ್ಟ್ ಸ್ಥಾಪಿಸಿ ಶೀಘ್ರ ವಿಚಾರಣೆ ಮಾಡಬೇಕು. ಸರ್ಕಾರವೇ ಗಲ್ಲು ಶಿಕ್ಷೆ ಆಗಬೇಕು ಅಂತ ಆಗ್ರಹಿಸುತ್ತದೆ. ನೀವೆಲ್ಲಾ ನೀರಲ್ಲಿ ಮುಳುಗಿ ಸಾಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಚ್ಚರಿ ಸೀಟು ಬರುತ್ತೆ ಕಾದುನೋಡಿ

ಬಿಜೆಪಿ ದೇಶದಲ್ಲಿ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತೆ ಎಂಬ ವಿಚಾರ ಕುರಿತು ಮಾತನಾಡಿ, 400 ಅಲ್ಲ, 150 ಸ್ಥಾನವನ್ನೂ ದಾಟುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೆ ಅಂತ ಹೇಳಿದ್ದೆ. ಈಗ 20ಕ್ಕಿಂತ ಹೆಚ್ಚು ಸ್ಥಾನ ನಾವು ಗೆಲ್ಲುತ್ತೇವೆ. ಅಚ್ಚರಿ ಸೀಟು ಬರುತ್ತೆ ಕಾದುನೋಡಿ ಎಂದು ರಣದೀಪ್​ ಸಿಂಗ್​ ಸುರ್ಜೇವಾಲ ಹೇಳಿದ್ದಾರೆ.

RELATED ARTICLES

Related Articles

TRENDING ARTICLES