ಯಾದಗಿರಿ : ಇದೇ ಮೊದಲ ಬಾರಿಗೆ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರು ಯಾದಗಿರಿ ಜಿಲ್ಲೆಗೆ ಆಗಮಿಸಿದರು. ಈ ವೇಳೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿಕೊಂಡರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಸಾಯಿಬಾಬಾ ಮಂದಿರಕ್ಕೆ ರವಿಚಂದ್ರನ್ ಭೇಟಿ ನೀಡಿ, ಆಶೀರ್ವಾದ ಪಡೆದರು.
ಇದೇ ವೇಳೆ ಸಾಯಿಬಾಬಾ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ರಮದಲ್ಲಿ ಭಾಗವಹಿಸಿ, ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. ಪುತ್ರನೊಂದಿಗೆ ಪ್ರೇಮಲೋಕ 2 ಸಿನಿಮಾ ಮಾಡಲಿದ್ದೇನೆ. ನನ್ನ ಅರಸಿ ಹಾರೈಸಿ ಎಂದು ಮನವಿ ಮಾಡಿದರು.
ನಿಮ್ಮ ಮಾತು ಮಾತ್ರ ಸ್ವಲ್ಪ ಒರಟು
ಉತ್ತರ ಕರ್ನಾಟಕದ ಜನರು ಹೃದಯ ಶ್ರೀಮಂತಿಕೆ ಹೊಂದಿದ್ದಾರೆ. ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಅವರ ಮಾತು ಮಾತ್ರ ಸ್ವಲ್ಪ ಒರಟು, ಆದರೆ ಅದರಲ್ಲೆ ನಿಜವಾದ ಪ್ರೀತಿ ಅಡಗಿದೆ. ನಿಮ್ಮೆಲ್ಲರ ಸದಾಶಯ (ಆಶೀರ್ವಾದ) ನನ್ನ ಮೇಲಿರಲಿ ಎಂದು ಹೇಳಿದರು.
ನಂತರ ಸಾಯಿಬಾಬಾ ಟ್ರಸ್ಟ್ನ ಅಧ್ಯಕ್ಷ ಮಹಾರಾಜ ದಿಗ್ಗಿ ನಟ ರವಿಚಂದ್ರನ್ ಹಾಗೂ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ರವಿಚಂದ್ರನ್ ಅಭಿಮಾನಿಗಳು ಹಾಗೂ ಭಕ್ತರು ಭಾಗವಹಿಸಿದ್ದರು.