ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿವೆ. ಮೇಲ್ನೋಟಕ್ಕೆ ಮಹಿಳೆಯರ ಮೇಲೆ ಹಾಸನ ಸಂಸದರು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.
ತನಿಖೆ ಭಯಕ್ಕೆ ಜರ್ಮನಿಗೆ ಪ್ರಜ್ವಲ್ ಪರಾರಿ?
ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಗೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿರೋ ಮಾಹಿತಿ ಲಭ್ಯವಾಗಿದೆ. ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದು, ಇದನ್ನು ತನ್ನದೇ ಫೋನ್ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಈ ವಿಡಿಯೋಗಳು ವೈರಲ್ ಆಗಿದ್ದು, ಮಹಿಳೆಯರಿಗೆ ನ್ಯಾಯ ಸಿಗಬೇಕೆಂದು ‘ದಾರಿ ತಪ್ಪಿದ ಮೊಮ್ಮಗ’ ಎಂಬ ಶೀರ್ಷಿಕೆಯಡಿ ಪವರ್ ಟಿವಿ ಸುದ್ದಿ ಬಿತ್ತಿರಿಸುತ್ತಿದೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ…— Siddaramaiah (@siddaramaiah) April 27, 2024