ಶಿವಮೊಗ್ಗ : ನಾಳೆಯಿಂದ ಚಲನಚಿತ್ರ ನಟರು ಪತ್ನಿ ಗೀತಾ ಶಿವರಾಜ್ಕುಮಾರ್ ಅವರ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ.
ಶಿವಮೊಗ್ಗದ ಭದ್ರಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟ ಧ್ರುವ ಸರ್ಜಾ, ನೆನಪಿರಲಿ ಪ್ರೇಮ್, ಡಾಲಿ ಧನಂಜಯ, ದುನಿಯಾ ವಿಜಯ್ ಹಾಗೂ ಅನುಶ್ರೀ ಬರುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಗೀತಾ ಪರ ಪ್ರಚಾರ ಬಹಳ ಚೆನ್ನಾಗಿದೆ. ಒಳ್ಳೆಯ ವಾತಾವರಣ ಇದೆ. ಅಭಿಮಾನಿ ದೇವರುಗಳ ಆಶೀರ್ವಾದವಿದೆ. ಕೇವಲ ಹತ್ತು ದಿನಗಳಷ್ಟೇ ಪ್ರಚಾರಕ್ಕೆ ಬಾಕಿ ಉಳಿದಿದೆ. ನಾವು ಫುಲ್ ಪ್ಲೆಡ್ಜ್ ಪ್ರಚಾರಕ್ಕೆ ಹೋಗ್ತಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : 11 ಕೆಜಿ ಚಿನ್ನ, 30 ಕೆಜಿ ಬೆಳ್ಳಿ, 54 ಕೋಟಿಯ ಮನೆ : ಶಿವಣ್ಣ ಪತ್ನಿ ಗೀತಾ ಕೋಟಿ ಕುಳ
ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳು ಅವೆಲ್ಲಾ ನಂಗೆ ಗೊತ್ತಾಗಲ್ಲ. ಅದೆಲ್ಲಾ ಪಾರ್ಟಿಯವರು ಮಾತಾಡ್ತಾರೆ. ನಾನು ಕೇವಲ ಗೀತಾ ಪರ ಪ್ರಚಾರ ಮಾಡುತ್ತಿದ್ದೇನೆ ಅಷ್ಟೇ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ.