Friday, May 17, 2024

ಬಟ್ಟೆ ತೊಳೆಯುತ್ತಿದ್ದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಚಿಕ್ಕಮಗಳೂರು : ಬಟ್ಟೆ ತೊಳೆಯುತ್ತಿದ್ದ ಪತ್ನಿಯನ್ನು ಪಾಯಿ ಪತಿಯೊಬ್ಬ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.

ಮೇಘಾ (20) ಮೃತ ಪತ್ನಿ. ಚರಣ್ (25) ಕೊಲೆಗೈದ ಪಾಪಿ ಪತಿ. ಪತ್ನಿ ಮೇಘನಾಳನ್ನು ಕೊಚ್ಚಿ ಕೊಂದು ಪತಿ ಚರಣ್​ ಎಸ್ಕೇಪ್ ಆಗಿದ್ದನು. ಬಳಿಕ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ.

ಮೃತ ಮೇಘಾ ಪ್ರೀತಿಸಿ ಕುಟುಂಬದ ಒಪ್ಪಿಗೆ ಪಡೆದು ಚರಣ್ ಜೊತೆ ಮದುವೆಯಾಗಿದ್ದರು. ಮೊದಮೊದಲು ಸಂಸಾರ ಚೆನ್ನಾಗಿಯೇ ಇತ್ತು. ಇತ್ತೀಚೆಗೆ ಗಂಡ ಹೆಂಡತಿ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು.

ಗಂಡನ ಕಿರುಕುಳಕ್ಕೆ ಬೇಸತ್ತ ಮೇಘನಾ ಮೂರು ವರ್ಷಗಳ ಹಿಂದೆ ಗಂಡನಿಂದ ದೂರವಾಗಿದ್ದಳು. ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದ ತಾಯಿ ಮನೆಯಲ್ಲಿ ವಾಸವಾಗಿದ್ದಳು. ಇಂದು ಕಾಲುವೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದಾಗ ಪತಿ ಕೊಚ್ಚಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಲಕ್ಕವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಹೇಳಿಕೆ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿ ಚರ್ ವಿರುದ್ಧ ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎನ್ನಲಾಗಿದೆ.

RELATED ARTICLES

Related Articles

TRENDING ARTICLES