Friday, May 17, 2024

ಇಂದು ಬಾಗಲಕೋಟೆಯಲ್ಲಿ ಮೋದಿ ಪ್ರಚಾರ

ನವದೆಹಲಿ: ಕರ್ನಾಟಕದಲ್ಲಿ ಈಗಾಗಲೇ ಮೊದಲನೇ ಹಂತದ ಲೋಕಸಭಾ ಚುನಾವಣೆ ಮತದಾನ ಇದೇ ಏಪ್ರಿಲ್​26 ರಂದು ಮುಕ್ತಾಯಗೊಂಡಿದ್ದು ಈ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಇನ್ನು ಎರಡನೇ ಹಂತದ ಮತದಾನ ಮೇ7 ರಂದು ನಡೆಯಲಿದ್ದು ಇಂದು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಧಾನಿ ಮೋದಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಂಧನ ಭೀತಿಯಲ್ಲಿ ಹೊಳೆನರಸಿಪುರ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ ರೇವಣ್ಣ

ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಾಗಲಕೋಟೆಯಲ್ಲಿ ಮಧ್ಯಾಹ್ನ 12-15ಕ್ಕೆ ಮೊದಲ ಬೃಹತ್ ಸಭೆ ನಡೆಯಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚಿಸಲಿದ್ದಾರೆ. ಅಲ್ಲಿಂದ ಮಹಾರಾಷ್ಟ್ರಕ್ಕೆ ತೆರಳಿ ಮಧ್ಯಾಹ್ನ 2:15ಕ್ಕೆ ಸೊಲ್ಲಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಕಾಂಗ್ರೆಸ್‌ನ ಪ್ರಣಿತಿ ಶಿಂಧೆ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಮ್ ಸತ್ಪುತೆ ಕಣಕ್ಕಿಳಿದಿದ್ದಾರೆ.

RELATED ARTICLES

Related Articles

TRENDING ARTICLES