ಬೆಂಗಳೂರು : ಮೇ 10ರಂದು ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿ ಪುತ್ರ’ ಸಿನಿಮಾ ರೀ ರಿಲೀಸ್ (ಮರು ಬಿಡುಗಡೆ) ಆಗಲಿದೆ.
ಈ ಚಿತ್ರವನ್ನು ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎಂ.ಎನ್. ಕುಮಾರ್ ನಿರ್ಮಿಸಿದ್ದು, ನಿರ್ದೇಶಕ ಎ. ಹರ್ಷ ಅಪ್ಪುಗೆ ಆ್ಯಕ್ಷನ್ಕಟ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ನಿರ್ಮಾಪಕ ಎಂ.ಎನ್ ಕುಮಾರ್ ಅವರು, ಪುನೀತ್ ರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ ಈ ಸೂಪರ್ ಹಿಟ್ ಸಿನಿಮಾ ಇದೇ ಮೇ 10ರಂದು ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ರೀ ರಿಲೀಸ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಚಿತ್ರದಲ್ಲಿ ಪುನೀತ್ ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದರು. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರದ ‘ಬಾರಿ ಖುಷಿ ಮಾರೆ ನಂಗೆ’ ಸೇರಿದಂತೆ ಎಲ್ಲಾ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದವು.
ಬೇಸಿಗೆ ರಜೆಯ ಈ ಸಮಯದಲ್ಲಿ ಸೂಪರ್ ಹಿಟ್ ಅಂಜನಿಪುತ್ರ ಚಿತ್ರವನ್ನು ಮತ್ತೊಮ್ಮೆ ಬಿಡುಗಡೆಯಾಗಲಿ. ತೆರೆಯ ಮೇಲೆ ಪರಮಾತ್ಮನನ್ನು ನೋಡಲು ಪುನೀತ್ ರಾಜಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.