Friday, May 17, 2024

ಟಿ-20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ : ಕನ್ನಡಿಗ ರಾಹುಲ್ ಔಟ್, ಧೋನಿ ಶಿಷ್ಯನಿಗೆ ತಂಡದಲ್ಲಿ ಸ್ಥಾನ

ಬೆಂಗಳೂರು : ಮುಂಬರುವ ಟಿ-20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್​ ಅವರಿಗೆ ತಂಡದಲ್ಲಿ ಅವಕಾಶ ನೀಡಿಲ್ಲ.

ಯುಎಸ್​ಎ ಹಾಗೂ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ಗಾಗಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದೊಂದಿಗೆ ನಾಲ್ವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ಈ 19 ಆಟಗಾರರಲ್ಲಿ ಶ್ರೇಯಸ್ ಅಯ್ಯರ್​, ಋಉತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ ಸೇರಿದಂತೆ ಹಲವರಿಗೆ ಅವಕಾಶ ನೀಡಿಲ್ಲ. ರಿಷಭ್ ಪಂತ್, ಸಂಜು ಸ್ಯಾಮ್ಸನ್, ಚಹಾಲ್, ಶಿವಂ ದುಬೆಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ನಾಲ್ವರು ಆಲ್​ರೌಡರ್​ಗಳಿಗೆ ಮಣೆ

ತಂಡದಲ್ಲಿ ನಾಲ್ವರು ಆಲ್​ರೌಂಡರ್​ಗಳಿಗೆ ಮಣೆ ಹಾಕಲಾಗಿದೆ. ಕುಲ್​ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಾಲ್ ಸ್ಪಿನ್ನರ್ ಕೋಟಾದಲ್ಲಿ ಸ್ಥಾನ ಪಡೆದಿದ್ದಾರೆ. ​ಸ್ಪಿನ್ ಆಲ್​ರೌಂಡರ್​ ಅಕ್ಸರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ. ಬೌಲಿಂಗ್​ ಆಲ್​ರೌಂಡರ್​ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಅವಕಾಶ ಪಡೆದಿದ್ದಾರೆ.

ಭಾರತ ತಂಡ :

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್​ದೀಪ್ ಯಾದವ್, ಚಹಾಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ಮೀಸಲು ಆಟಗಾರರು :

ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್​ ಅಹ್ಮದ್​, ಅವೇಶ್ ಖಾನ್

RELATED ARTICLES

Related Articles

TRENDING ARTICLES