ಬೆಂಗಳೂರು : ಮುಂಬರುವ ಟಿ-20 ವಿಶ್ವಕಪ್ಗೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ತಂಡದಲ್ಲಿ ಅವಕಾಶ ನೀಡಿಲ್ಲ.
ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗಾಗಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದೊಂದಿಗೆ ನಾಲ್ವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.
ಈ 19 ಆಟಗಾರರಲ್ಲಿ ಶ್ರೇಯಸ್ ಅಯ್ಯರ್, ಋಉತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ ಸೇರಿದಂತೆ ಹಲವರಿಗೆ ಅವಕಾಶ ನೀಡಿಲ್ಲ. ರಿಷಭ್ ಪಂತ್, ಸಂಜು ಸ್ಯಾಮ್ಸನ್, ಚಹಾಲ್, ಶಿವಂ ದುಬೆಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ನಾಲ್ವರು ಆಲ್ರೌಡರ್ಗಳಿಗೆ ಮಣೆ
ತಂಡದಲ್ಲಿ ನಾಲ್ವರು ಆಲ್ರೌಂಡರ್ಗಳಿಗೆ ಮಣೆ ಹಾಕಲಾಗಿದೆ. ಕುಲ್ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಾಲ್ ಸ್ಪಿನ್ನರ್ ಕೋಟಾದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಪಿನ್ ಆಲ್ರೌಂಡರ್ ಅಕ್ಸರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ. ಬೌಲಿಂಗ್ ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಅವಕಾಶ ಪಡೆದಿದ್ದಾರೆ.
ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಚಹಾಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಮೀಸಲು ಆಟಗಾರರು :
ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್
🚨India’s squad for ICC Men’s T20 World Cup 2024 announced 🚨
Let’s get ready to cheer for #TeamIndia #T20WorldCup pic.twitter.com/jIxsYeJkYW
— BCCI (@BCCI) April 30, 2024