Tuesday, May 21, 2024

ಪ್ರಜ್ವಲ್ ರಾಸಲೀಲೆ : ಇದೆಲ್ಲಾ ವಿಕೃತ ಮನಸ್ಸಿನ ದೊಡ್ಡ ಅಪರಾಧ : ಹೆಚ್.ಕೆ. ಪಾಟೀಲ್

ಗದಗ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಚಿವ ಹೆಚ್​.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಇದೆಲ್ಲಾ ವಿಕೃತ ಮನಸ್ಸಿನ ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ರಾಜಕಾರಣಿ. ಅದರಲ್ಲೂ ಜನಸೇವೆಯಲ್ಲಿ ತೊಡಗಿಸಿಕೊಂಡಿರುವವನು ಹೀಗೆ ಮಾಡಿದ್ದಾನೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ವಿಕೃತ ಮನಸ್ಸಿನವರು ಮಾತ್ರ ಹೀಗೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣರ ಈ ಪ್ರಕರಣದಿಂದಾಗಿ ರಾಜಕಾರಣದಲ್ಲಿ ಇರುವವರು ಮುಖ ಎತ್ತಿ ನಡೆಯುವುದು ಹೇಗೆ ಎಂಬ ದೊಡ್ಡ ಪ್ರಶ್ನೆ ಎದುರಾಗಿದೆ. ಈ ತರಹದ ಗುನ್ನೆ, ಈ ತರಹದ ವಿಕೃತ ಮನಸ್ಸುಗಳು ಇರುತ್ತವೆ ಎಂಬುದನ್ನು ಊಹಿಸಲೂ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಬಿಡುಗಡೆ ಹಿಂದೆ ಕಾಂಗ್ರೆಸ್ ನಾಯಕರೊಬ್ಬರ ಕೈವಾಡ ಇದೆ ಎಂಬ ವಿರೋಧ ಪಕ್ಷಗಳ ಆರೋಪ ಆಧಾರರಹಿತವಾದದ್ದು. ಜೆಡಿಎಸ್ ಪಕ್ಷದವರೇ ಆದ ಹೆಚ್.ಡಿ. ಕುಮಾರಸ್ವಾಮಿ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ನಮಗೂ ಅವರ ಕುಟುಂಬಕ್ಕೂ ಸಂಬಂಧವೇ ಇಲ್ಲ ಅಂದಿದ್ದಾರೆ. ಅವರ ಮಾತುಗಳ ಅರ್ಥ ಏನು? ಇದರಿಂದಲೇ ಎಲ್ಲವೂ ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಸಚಿವ ಹೆಚ್​.ಕೆ. ಪಾಟೀಲ್​​ ಹೇಳಿದ್ದಾರೆ.

RELATED ARTICLES

Related Articles

TRENDING ARTICLES