ಬೆಂಗಳೂರು : ಮುಂಬರುವ ಟಿ-20 ವಿಶ್ವಕಪ್ಗಾಗಿ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆಯ್ಕೆದಾರರು ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದಾರೆ.
ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಕನ್ನಡಿಗ ಕೆ.ಎಲ್. ರಾಹುಲ್ ಹಾಗೂ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ನೀಡಲಾಗಿಲ್ಲ. ಇಶಾನ್ ಕಿಶನ್ಗೂ ಆಯ್ಕೆದಾರರು ಮಣೆ ಹಾಕಿಲ್ಲ.
ಆಯ್ಕೆದಾರರು ಮತ್ತೊಮ್ಮೆ ಹಾರ್ದಿಕ್ ಪಾಂಡ್ಯ (ಉಪನಾಯಕ) ಮೇಲೆ ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಪ್ರಕಟಗೊಂಡ ತಂಡವನ್ನು ನೋಡಿದರೆ ಆಯ್ಕೆದಾರರು ಐಪಿಎಲ್ ಪ್ರದರ್ಶನವನ್ನು ಆಧಾರವಾಗಿ ಪರಿಗಣಿಸಿಲ್ಲ ಎಂದು ಹೇಳಬಹುದು.
ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಮಿಂಚುತ್ತಿರುವ ಧೋನಿ ಶಿಷ್ಯ ಶಿವಂ ದುಬೆಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇನ್ನೂ ಅಪಘಾತದ ಬಳಿಕ ಐಪಿಎಲ್ನಲ್ಲಿ ಭರ್ಜರಿ ಕಂಬ್ಯಾಕ್ ಮಾಡಿರುವ ರಿಷಭ್ ಪಂತ್ಗೆ ಸ್ಥಾನ ಲಭಿಸಿದೆ.
ಈ ವೇಗದ ಬೌಲರ್ಗೆ ಏಕಿಲ್ಲ ಸ್ಥಾನ?
ಗಾಯದ ಸಮಸ್ಯೆಯ ಕಾರಣದಿಂದಾಗಿ ಮೊಹಮ್ಮದ್ ಶಮಿಗೆ ತಂಡದಲ್ಲಿ ಅವಕಾಶ ನೀಡಿಲ್ಲ. ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರ ಪರ ಆಯ್ಕೆದಾರರು ವಿಶ್ವಾಸ ವ್ಯಕ್ತಪಡಿಸಿಲ್ಲ. ಇನ್ನೂ ಸಂದೀಪ್ ಶರ್ಮಾ, ದೀಪಕ್ ಚಹರ್, ಟಿ. ನಟರಾಜನ್ ಅವರಿಗೂ ಆಯ್ಕೆದಾರರು ಮಣೆ ಹಾಕಿಲ್ಲ. ಇನ್ನೂ ಸ್ಪಿನ್ ಕೋಟಾದಲ್ಲಿ ಚಹಾಲ್ ಅಚ್ಚರಿ ಎಂಬಂತೆ ಆಯ್ಕೆಯಾಗಿದ್ದಾರೆ.
ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಚಹಾಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಮೀಸಲು ಆಟಗಾರರು :
ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್
Presenting #TeamIndia for the ICC Men’s T20 World Cup to be hosted in the West Indies and USA! pic.twitter.com/6NoFJBMOjT
— BCCI (@BCCI) April 30, 2024