ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹೇಯ ಕೃತ್ಯವೆಸಗಿರುವ ರಾಕ್ಷಸನ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿದ್ದೇಕೆ? ಇದಕ್ಕೆ ಮೋದಿ ಉತ್ತರಿಸಬೇಕು ಎಂದು ಕಿಡಿಕಾರಿದ್ದಾರೆ.
ಘೋರ ಅಪರಾಧಗಳ ಬಗ್ಗೆ ಕೂಡ ಪ್ರಧಾನಿ ಮೋದಿ ನಾಚಿಕೆಗೇಡಿತನದಿಂದ ಮೌನ ವಹಿಸಿದ್ದಾರೆ. ಎಲ್ಲಾ ಗೊತ್ತಿದ್ದರೂ ವೋಟಿಗಾಗಿ ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ತಮ್ಮ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪರ ಮೋದಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಷ್ಟಕ್ಕೂ ಇಷ್ಟು ದೊಡ್ಡ ಕ್ರಿಮಿನಲ್ (ಆರೋಪಿ) ದೇಶದಿಂದ ಪರಾರಿಯಾಗಿದ್ದು ಹೇಗೆ? ಆರೋಪಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನ ಬೆಂಬಲ, ಅಪರಾಧಿಗಳಿಗೆ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
कर्नाटक में महिलाओं के साथ हुए वीभत्स अपराध पर भी नरेंद्र मोदी ने हमेशा की तरह शर्मनाक चुप्पी साध ली है।
प्रधानमंत्री को जवाब देना होगा:
सब कुछ जान कर भी सिर्फ वोटों के लिए उन्होंने सैकड़ों बेटियों का शोषण करने वाले हैवान का प्रचार क्यों किया?
आखिर इतना बड़ा अपराधी बड़ी…
— Rahul Gandhi (@RahulGandhi) May 1, 2024