ಬೆಳಗಾವಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಸತ್ತಿ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ ಮೃತ ದುರ್ದೈವಿ. ಮೀನು ಹಿಡಿಯಲು ಹೋಗಿ ಮೀನಿನ ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾನೆ. ಮೃತ ಮಹಾಂತೇಶ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ತಾಯಿ ಅನುಮಾನಾಸ್ಪದ ಸಾವು, ಇಬ್ಬರು ಮಕ್ಕಳು ಅನಾಥ
ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಮಹಾಂತೇಶ, ಎಂದಿನಂತೆ ಇಂದು ಬೆಳಿಗ್ಗೆ ಸತ್ತಿ ಗ್ರಾಮದ ಹೊರವಲಯದ ಕೃಷ್ಣ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮೀನಿಗೆ ಬಲೆ ಹಾಕುವ ವೇಳೆ ಕಾಲಿಗೆ ಬಲೆ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳೀಯರ ಸಹಾಯದಿಂದ ಮೃತ ದೇಹ ಹೊರತೆಗೆಯಲಾಗಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.