Friday, May 17, 2024

ಗ್ಯಾಸ್​ ಸಿಲಿಂಡರ್​ ಸ್ಪೋಟ: ಧಗಧಗನೇ ಹೊತ್ತಿ ಉರಿದ ಗುಡಿಸಲುಗಳು

ಯಾದಗಿರಿ: ಗ್ಯಾಸ್​ ಸಿಲಿಂಡರ್​ ಸ್ಪೋಟಗೊಂಡು ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕುನ ಮಲ್ಲಾ.ಬಿ ಗ್ರಾಮದಲ್ಲಿ ನಡೆದಿದೆ.

ಮಲ್ಲಾರೆಡ್ಡಿ ಹಾಗು ಮಲ್ಕಪ್ಪ ಎಂಬುವವರಿಗೆ ಸೇರಿದ ಗುಡಿಸಲುಗಳು ಬೆಂಕಿಯ ಕೆನ್ನಾಲಗೆಗೆ ಸುಟ್ಟುಕರಕಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ; ಮೂವರು ಸಾವು

ಅದೃಷ್ಟವಷಾತ್ ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,​ ಘಟನಾ ಸ್ಥಳಕ್ಕೆ ಕೆಂಬಾವಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES