Friday, May 17, 2024

ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೋಟಿ ಪರ ಸಚಿವ ಸಂತೋಷ್ ಲಾಡ್ ಪ್ರಚಾರ

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಜೋರಾಗುತ್ತಿದ್ದು, ಈ ನಡುವೆ ಸಚಿವ ಸಂತೋಷ್ ಲಾಡ್ ವಿಭಿನ್ನ ರೀತಿಯಲ್ಲಿ ಜನರಲ್ಲಿ ಜಾಗೃತಿಯೊಂದಿಗೆ ಮತಯಾಚನೆ ಮಾಡಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ್ ಅಸೂಟಿ ಪರವಾಗಿ ಧಾರವಾಡದಲ್ಲಿ ಅವರು ಪ್ರಚಾರ ನಡೆಸಿದರು. ಕಳೆದ ಹತ್ತು ವರ್ಷಗಳಲ್ಲಿ ದೇಶದ ಸಾಲ 168.72 ಲಕ್ಷ ಕೋಟಿ ಆಗಿದೆ. ಭಾರತೀಯ ರೂಪಾಯಿ ಶೇ 41.37 ರಷ್ಟು ಕುಸಿದಿದೆ. ಇದಕ್ಕೆಲ್ಲ ಯಾರು ಹೊಣೆ ಎಂದು ಪ್ರಶ್ನಿಸಿದರು.

ಇಂತಹ ಹಲವಾರು ವಿಷಯಗಳನ್ನು ಒಳಗೊಂಡ ಫ್ಲೆಕ್ಸ್‌ಗಳನ್ನು ಹಿಡಿದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಕೆಲಗೇರಿಯ ಬೀದಿಗಳಲ್ಲಿ ಜನರನ್ನು ಮಾತನಾಡಿಸಿ ಜಾಗೃತಿ ಮೂಡಿಸಿದರು.

ದೇಶದ ಜನರಿಗೆ ಕಳೆದ ಹತ್ತು ವರ್ಷಗಳಲ್ಲಿ ಸಾಲ ಎಷ್ಟು ಹೆಚ್ಚಳವಾಗಿದೆ. ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ. ಅಗತ್ಯ ವಸ್ತು, ತೈಲ ಬೆಲೆ ಎಷ್ಟು ಆಗಿದೆ ಎಂಬುದರ ಅರಿವು ಇರಬೇಕು. ಈ ಹತ್ತು ವರ್ಷದಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಬೆಲೆ ಇಳಿಕೆಗೆ, ರೂಪಾಯಿ ಮೌಲ್ಯವರ್ಧನೆಗೆ ಏನೂ ಮಾಡಲಿಲ್ಲ. ಹೋಗಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಈ ಹತ್ತು ವರ್ಷಗಳಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡಲಿಲ್ಲ. ಇದಕ್ಕೆಲ್ಲ ಯಾರು ಹೊಣೆ ಎಂಬ ಪ್ರಶ್ನೆಗಳನ್ನು ಇಟ್ಟುಕೊಂಡು ಪ್ರಚಾರ ನಡೆಸಿದರು.

ಇವು ದೇಶದ ವಾಸ್ತವ ಪರಿಸ್ಥಿತಿ. ಆದರೆ, ಮಾಧ್ಯಮಗಳಲ್ಲಿ ಇವುಗಳ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ. ಹಿಂದೂ ಮುಸ್ಲಿಂ ವಿಷಯಗಳೇ ಚರ್ಚೆಗೆ ಬರುತ್ತಿವೆ. ಈ ಬಗ್ಗೆ ಜನರೇ ಅರಿವು ಹೊಂದಬೇಕು. ಬಿಜೆಪಿಯನ್ನು ತಿರಸ್ಕರಿಸಿ. ಕಾಂಗ್ರೆಸ್‌ ಯಾಕೆ ಬೇಕು ಎಂಬುದನ್ನು ಜನರೇ ತೀರ್ಮಾನಿಸಬೇಕು ಎಂದು ಮನವಿ ಮಾಡಿದರು.

RELATED ARTICLES

Related Articles

TRENDING ARTICLES