ಕಲಬುರಗಿ: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 24 ಗಂಟೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ, ಹಾಜರಾಗದಿದ್ದರೇ ಬಂಧನ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ, ಇವಾಗ ಇತರೇ ದೇಶಗಳಿಗೂ ಈ ವಿಷಯ ತಲುಪಿದೆ, ನೂರಾರು ಜನ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದರು.
ಹಿಂದೆ ನಿಮ್ಮ ಗಮನಕ್ಕೆ ಬಂದಿಲ್ವಾ ಎಂದು ನೀವು ಕೇಳಬಹುದು? ಆದರೇ, ದೂರು ಯಾರು ನೀಡಿರಲಿಲ್ಲ, ಮಹಿಳಾ ಆಯೋಗದ ಗಮನಕ್ಕೆ ಬಂದ ತಕ್ಷಣ ದೂರು ನೀಡಿದ್ದಾರೆ. ತಕ್ಷಣ ಎಸ್ಐಟಿ ರಚನೆ ಮಾಡಿ ತನಿಖೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ: Prajwal Revanna Pendrive Case: ಲುಕ್ಔಟ್ ನೋಟೀಸ್ ಜಾರಿ
ಇನ್ನು ಪ್ರಕರಣ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ. ಹೊರ ದೇಶಕ್ಕೆ ಹೋಗುವಾಗ ಕೇಂದ್ರ ಸರ್ಕಾರ ಅವರಿಗೆ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ಕೊಟ್ಟಿದೆ, ಈ ಬಗ್ಗೆ ಹೆಚ್ಚಿನ ಪ್ರಶ್ನೆ ಮಾಡಲ್ಲ ಎಂದು ಹೇಳಿದರು.
ವಿಚಾರಣೆ ಹಾಜರಾಗುವಂತೆ ರೇವಣ್ಣಗೆ ನೋಟೀಸ್:
ಈ ಪ್ರಕರಣಕ್ಕೆ ಸಂಬಂಧಿಸಿ ಎ1 ಆರೋಪಿ ಹೆಚ್.ಡಿ ರೇವಣ್ಣ ಅವರಿಗೆ 41(a) ಸೆಕ್ಷನ್ ಅಡಿ ನೊಟೀಸ್ ಜಾರಿ ಮಾಡಲಾಗಿದೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು, ಹಾಜರಾಗದೇ ಇದ್ದರೇ ರೇವಣ್ಣ ಅವರನ್ನು ಬಂಧಿಸಲಾಗುತ್ತದೆ.
ಇದನ್ನೂ ಓದಿ: ಪ್ರಜ್ವಲ್ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಮನವಿ
ಪ್ರಜ್ವಲ್ ಗೆ ಲುಕೌಟ್ ನೋಟೀಸ್:
ಪೆನ್ಡ್ರೈವ್ ಪ್ರಕರಣದ ಎ2 ಆರೋಪಿ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿರುವ ಹಿನ್ನೆಲೆ ಅವರಿಗೂ ಲುಕೌಟ್ ನೋಟೀಸ್ ಜಾರಿ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ, ಈ ಪ್ರಕರಣದಲ್ಲಿ ಸಮಯ ಕೊಡೋದಕ್ಕೆ ಸಾಧ್ಯವಿಲ್ಲ ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲು ಎಸ್ಐಟಿ ಮುಂದುವರೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.
ಪೆನ್ಡ್ರೈವ್ ಪ್ರಕರಣದ ಬಗ್ಗೆ ಸರ್ಕಾರ ಗಂಭೀರ ನಿಲುವು:
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಯಾರನ್ನು ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ, ಈ ಪ್ರಕರಣದಲ್ಲಿ ಇಬ್ಬರು ಮಹಿಳೆಯರಿಂದ ದೂರ ದಾಖಲಾಗಿದೆ, ಸಾವಿರಾರು ಮಹಿಳೆಯರು ಈ ವೀಡಿಯೋದಲ್ಲಿ ಇದ್ದಾರೆ ಹಾಗಾಗಿ ಈ ಕೇಸ್ ಹೇಗೆ ಬೇಕೋ ಹಾಗೇ ಮಾಡೋದಕ್ಕೆ ಆಗೋದಿಲ್ಲ, ಸಂತ್ರಸ್ತೆಯರ ಕುಟುಂಬದ ಬಗ್ಗೆ ಕೂಡ ನಾವು ಆಲೋಚನೆ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.