Saturday, May 18, 2024

ಆ ವಿಡಿಯೋ ನಾನು ನೋಡಿಲ್ಲ, ಕನಿಷ್ಠ ಆ ವೀಡಿಯೋ ಬ್ಲರ್ ಕೂಡ ಆಗಿಲ್ಲ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ನನಗೆ ಒಂದೇ ಒಂದು ದುಃಖ ಇದೆ. ಅದು ಏನಂದ್ರೆ, ಆ ವಿಡಿಯೋ ಏನಿದೆ ಅದನ್ನ ನಾನು ನೋಡೋಕೆ ಧೈರ್ಯ ಮಾಡಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ, ಕನಿಷ್ಠ ಆ ವೀಡಿಯೋ ಬ್ಲರ್ ಕೂಡ ಆಗಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ಮುಖ ಕಾಣುವ ರೀತಿ ತೋರಿಸಿದ್ದಾರೆ. ಇದು ನಿಜಕ್ಕೂ ಕೂಡ ಬೇಜಾರ ಆಗುತ್ತೆ. ಇದರ ಬಗ್ಗೆಯೂ ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಹಾಸನ ಟಿಕೆಟ್ ಕೊಡುವ ವಿಚಾರದಲ್ಲಿ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಮಾತನಾಡಿ, ಪಕ್ಷದ ಕಾರ್ಯಕರ್ತರು, ರಾಷ್ಟ್ರೀಯ ಅಧ್ಯಕ್ಷರು ಅಂತಿಮ ನಿರ್ಧಾರ ಮಾಡಿದ್ದಾರೆ. ಅವರ ನಿರ್ಧಾರಕ್ಕೆ ತಲೆಬಾಗಿ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಕಾರ್ಯಕರ್ತರ ಬಳಿ ಕುಮಾರಣ್ಣ ಹೋಗ್ತಾರೆ

ಪ್ರಕರಣದಿಂದ ಪಕ್ಷದ ಕಾರ್ಯಕರ್ತರರಿಗೆ ಧೈರ್ಯ ಹೇಳುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನೂರಕ್ಕೆ ನೂರು ಆ ವಿಚಾರದಲ್ಲಿ ಹಾಸನಕ್ಕೆ ಹೋಗೋದು ಇದೆ. ಪಕ್ಷದ ನಾಯಕರು, ಕಾರ್ಯಕರ್ತರ ಬಳಿ ಕುಮಾರಣ್ಣ ಹೋಗ್ತಾರೆ ಎಂದು ತಿಳಿಸಿದರು.

ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡ್ತಾ ಇದೆ

ಶಾಸಕ ಶಿವರಾಮೇಗೌಡ್ರ ಆರೋಪ ವಿಚಾರವಾಗಿ ಮಾತನಾಡಿ, ಶಿವರಾಮೇಗೌಡರು ಬಹಳ ದೊಡ್ಡವರಿದ್ದಾರೆ. ಪಾಪ ಏನೋ ಮಾತನಾಡುತ್ತಾರೆ. ಈಗಾಗಲೇ ರಾಜ್ಯ ಸರ್ಕಾರದಿಂದ ಎಸ್ಐಟಿ ರಚನೆ ಆಗಿದೆ. ತನಿಖೆ ಕೂಡ ನಡೀತಾ ಇದೆ. ಈ ಒಂದು ಪ್ರಕರಣ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡ್ತಾ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

RELATED ARTICLES

Related Articles

TRENDING ARTICLES