ತುಮಕೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅವನು ಆ ಸ್ವಭಾವದ ಹುಡುಗ ಅಲ್ಲ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಮೇಲಿನ ಪ್ರಕರಣ ಸತ್ಯನೋ? ಸುಳ್ಳೋ? ಎಂಬುದು ಎಸ್ಐಟಿ ತನಿಖೆ ಬಳಿಕ ತಿಳಿಯಲಿದೆ. ಏನು ಗ್ರಹಚಾರವೋ? ಯಾರ ಕೈವಾಡವೋ? ಗೊತ್ತಿಲ್ಲ. ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಆ ವಿಡಿಯೋ ನಾನು ನೋಡಿಲ್ಲ, ಕನಿಷ್ಠ ಆ ವೀಡಿಯೋ ಬ್ಲರ್ ಕೂಡ ಆಗಿಲ್ಲ : ನಿಖಿಲ್ ಕುಮಾರಸ್ವಾಮಿ
ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧವೂ ಪಿತೂರಿ ಮಾಡಿದ್ದರು. ಮನೆ ಹಾಳು ಮಾಡಿ, ಮಾನ ಮರ್ಯಾದೆ ಹರಾಜು ಹಾಕಿದ್ದಾರೆ. ಜಾರಕಿಹೋಳಿ ಪ್ರಕರಣದಲ್ಲಿ ವಿರೋಧ ಪಕ್ಷದವರೇ ಪಿತೂರಿ ಮಾಡಿದ್ದರು. ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ರೆ, ಆರೋಪಿಗೆ ಶಿಕ್ಷೆ ಆಗಲೇಬೇಕು ಎಂದು ಸಂಸದ ಬಸವರಾಜ್ ಒತ್ತಾಯಿಸಿದ್ದಾರೆ.