ವಿಜಯಪುರ: ಬೇಸಿಗೆಯ ಬಿಸಿ ತಡೆಯಲಾಗದೇ ಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪರುವ ಘಟನೆ ಜಿಲ್ಲೆಯ ಮುಖಣಾಪುರ ಗ್ರಾಮದಲ್ಲಿ ನಡೆದಿದೆ.
ರಾಜು ಕಾತ್ರಾಳ (35) ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಯುವಕ, ಜಿಲ್ಲೆಯಾದ್ಯಂತ ವಿಪರೀತ ಬಿಸಿಲಿನಿಂದ ಬಳಲಿದ್ದ ರಾಜು ಕುತ್ರಾಳ ಕೆರೆಯಲ್ಲಿ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ವಿದ್ಯುತ್ ತಂತಿ ತುಳಿದು ರೈತ ಸ್ಥಳದಲ್ಲೇ ಸಾವು!
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ನೆನ್ನೆ ರಾತ್ರಿಯ ವರೆಗೆ ಮೃತ ದೇಹದ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ ಕತ್ತಲಾದ ಹಿನ್ನೆಲೆ ಪತ್ತೆ ಕಾರ್ಯ ನಿಲ್ಲಿಸಿ ಇಂದು ಬೋಟ್ ಸಹಾಯದಿಂದ ಹುಟುಕಾಟ ಮುಂದುವರೆಸಿ ಮೃತ ದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆಯೂ ವಿಜಯಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.