Sunday, May 19, 2024

ಸೋಲಿನ ಭೀತಿಯಿಂದ ಈಶ್ವರ್ ಖಂಡ್ರೆ ದುಡ್ಡು ಹಂಚುತ್ತಿದ್ದಾರೆ : ಭಗವಂತ ಖೂಬಾ ಆರೋಪ

ಬೀದರ್ : ಗಡಿ ಜಿಲ್ಲೆ ಬೀದರ್‌ನಲ್ಲಿ ಲೋಕಸಭಾ ಚುನಾವಣಾ ಕಾವು ಹೆಚ್ಚಾಗಿದೆ. ಈ ಮಧ್ಯೆ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಹಣ ಹಂಚುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ವಿರುದ್ದ ಭಗವಂತ ಖೂಬಾ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮುನ್ಸೂಚನೆ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಿನ ಆತಂಕ ಎದುರಾಗಿದೆ. ಹೀಗಾಗಿ, ಕಾಂಗ್ರೆಸ್‌ನವರು ಹತಾಶರಾಗಿದ್ದಾರೆ ಎಂದು ಕುಟುಕಿದ್ದಾರೆ.

ಬೀದರ್ ಜಿಲ್ಲೆಯಲ್ಲಿಯೂ ನನ್ನ 10 ವರ್ಷಗಳ ಸಾಧನೆ, ಅಬಿವೃದ್ಧಿ ಪರ ಕೆಲಸಗಳಿಂದ ನನ್ನ ಗೆಲುವಿನ ಕುರಿತು ಜನರು ಮಾತನಾಡುತ್ತಿದ್ದಾರೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ, ಡಿಸಿಸಿ ಬ್ಯಾಂಕ್ ಸಿಬ್ಬಂದಿ ಹಾಗೂ ಪಿಕೆಪಿಎಸ್ ಕಾರ್ಖಾನೆಯ ಸಿಬ್ಬಂದಿಗಳನ್ನ ಅಕ್ರಮದಲ್ಲಿ ಭಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗದ್ದುಗೆ ಬದಲಾಗಬಹದು. ಆಗ ನೀವೆಲ್ಲರೂ ತನಿಖಯಲ್ಲಿ ಭಾಗಿಯಾಗಬೇಕಾಗುತ್ತದೆ. ಹಾಗಾಗಿ, ಡಿಸಿಸಿ ಬ್ಯಾಂಕ್ ಸಿಬ್ಬಂದಿ ಹಾಗೂ ಪಿಕೆಪಿಎಸ್ ಕಾರ್ಯದರ್ಶಿಗಳು ಗಮನಹರಿಸಿ ಕೆಲಸ ಮಾಡಬೇಕಾಗಿದೆ ಅಂತ ಕಿವಿಮಾತು ಹೇಳ್ತಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES