Saturday, May 18, 2024

ಮೇ 7ಕ್ಕೆ ಚುನಾವಣೆ : ಮತದಾರರಿಗೆ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದೇನು?

ಬೆಂಗಳೂರು : ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶೇಷ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬಲಿಷ್ಠ ಭಾರತಕ್ಕಾಗಿ, ಕರ್ನಾಟಕದ ಸಮೃದ್ಧಿಗಾಗಿ ಮೋದಿಯವರನ್ನು ಬೆಂಬಲಿಸಿ. ನಮ್ಮ ಬಿಜೆಪಿ (ಎನ್​ಡಿಎ) ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಕೇಳಿಕೊಂಡಿದ್ದಾರೆ.

ಕರುನಾಡಿನ ಜನತೆಗೆ ನನ್ನ ನಮಸ್ಕಾರಗಳು. ಮೇ 7, ಮಂಗಳವಾರ ರಾಜ್ಯದ 2 ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯ ಸಾಧಿಸಲು ತಮ್ಮ ಅಮೂಲ್ಯ ಮತವನ್ನು ನೀಡಿ ಬೆಂಬಲಿಸಬೇಕೆಂದು ವಿನಂತಿಸುವೆ ಎಂದು ತಿಳಿಸಿದ್ದಾರೆ.

ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತಿದೆ. ಈ ಚುನಾವಣೆ ರಾಜಕೀಯ ಪಕ್ಷಗಳ ನಡುವಿನ ಚುನಾವಣೆ ಎನ್ನುವುದಕ್ಕಿಂತಲೂ ಭಾರತವನ್ನು ಗೆಲ್ಲಿಸಬೇಕಾದ ಚುನಾವಣೆಯಾಗಿದೆ. ಅದಕ್ಕಾಗಿ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸುವುದು ಭಾರತೀಯರ ಪಾಲಿಗೆ ಒಂದು ಶ್ರೇಷ್ಠ ಅವಕಾಶವಾಗಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

RELATED ARTICLES

Related Articles

TRENDING ARTICLES