ಬೆಂಗಳೂರು : ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶೇಷ ಮನವಿ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬಲಿಷ್ಠ ಭಾರತಕ್ಕಾಗಿ, ಕರ್ನಾಟಕದ ಸಮೃದ್ಧಿಗಾಗಿ ಮೋದಿಯವರನ್ನು ಬೆಂಬಲಿಸಿ. ನಮ್ಮ ಬಿಜೆಪಿ (ಎನ್ಡಿಎ) ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಕೇಳಿಕೊಂಡಿದ್ದಾರೆ.
ಕರುನಾಡಿನ ಜನತೆಗೆ ನನ್ನ ನಮಸ್ಕಾರಗಳು. ಮೇ 7, ಮಂಗಳವಾರ ರಾಜ್ಯದ 2 ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯ ಸಾಧಿಸಲು ತಮ್ಮ ಅಮೂಲ್ಯ ಮತವನ್ನು ನೀಡಿ ಬೆಂಬಲಿಸಬೇಕೆಂದು ವಿನಂತಿಸುವೆ ಎಂದು ತಿಳಿಸಿದ್ದಾರೆ.
ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತಿದೆ. ಈ ಚುನಾವಣೆ ರಾಜಕೀಯ ಪಕ್ಷಗಳ ನಡುವಿನ ಚುನಾವಣೆ ಎನ್ನುವುದಕ್ಕಿಂತಲೂ ಭಾರತವನ್ನು ಗೆಲ್ಲಿಸಬೇಕಾದ ಚುನಾವಣೆಯಾಗಿದೆ. ಅದಕ್ಕಾಗಿ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸುವುದು ಭಾರತೀಯರ ಪಾಲಿಗೆ ಒಂದು ಶ್ರೇಷ್ಠ ಅವಕಾಶವಾಗಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಕರುನಾಡಿನ ಜನತೆಗೆ ನನ್ನ ನಮಸ್ಕಾರಗಳು
ಮೇ 7 ನೇ ರ ಮಂಗಳವಾರ ರಾಜ್ಯದ 2 ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯ ಸಾಧಿಸಲು ತಮ್ಮ ಅಮೂಲ್ಯ ಮತವನ್ನು ನೀಡಿ ಬೆಂಬಲಿಸಬೇಕೆಂದು ವಿನಂತಿಸುವೆ.
ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತಿದೆ, ಈ ಚುನಾವಣೆ… pic.twitter.com/G4z37dg16D
— Vijayendra Yediyurappa (Modi Ka Parivar) (@BYVijayendra) May 5, 2024