Sunday, May 19, 2024

ಜಡ್ಡು ಜಾದೂಗೆ ಪಂಜಾಬ್ ಬರ್ನ್ : ಚೆನ್ನೈಗೆ 28 ರನ್​ಗಳ ಭರ್ಜರಿ ಗೆಲುವು

ಬೆಂಗಳೂರು : ಜಡ್ಡು ಜಾದೂಗೆ ಪಂಜಾಬ್​ ಕಿಂಗ್ಸ್ ಬರ್ನ್ ಆಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿ ಮಿಂಚಿದ ಸರ್ ರವೀಂದ್ರ ಜಡೇಜಾ ಸೋಲಿನ ಸುಳಿಯಲ್ಲಿದ್ದ ಚೆನ್ನೈಗೆ ಭರ್ಜರಿ ಗೆಲುವು ತಂದುಕೊಟ್ಟರು.

ಪಂಜಾಬ್ ಕಿಂಗ್ಸ್ ವಿರುದ್ಧ ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ 28 ರನ್​ಗಳ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟಿತು.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್​ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ಪಂಜಾಬ್​ ಬೌಲರ್​ಗಳ ದಾಳಿಗೆ ನಲುಗಿತು. 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು.

168 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗಳನ್ನು ಕಳೆದುಕೊಂಡು 139 ರನ್​ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಗೆಲ್ಲಲೇಬೇಕಾದ ಚೆನ್ನೈ ಸೂಪರ್ ಕಿಂಗ್ಸ್​ 28 ರನ್​ಗಳಿಂದ ಗೆಲುವಿನ ನಗೆ ಬೀರಿತು. ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು.

ಇನ್ನಿಂಗ್ಸ್​ ಆರಂಭಿಸಿದ ಪಂಜಾಬ್​ಗೆ ಉತ್ತಮ ಆರಂಭ ಸಿಗಲಿಲ್ಲ. ಜಾನಿ ಬೈರ್‌ಸ್ಟೋವ್ 7 ಹಾಗೂ ರಿಲೀ ರೊಸೊವ್ ಶೂನ್ಯಕ್ಕೆ ಔಟಾದರು. ಪಂಜಾಬ್ ಪರ ಪ್ರಭಾಸಿಮ್ರಾನ್ ಸಿಂಗ್ 30, ಶಶಾಂಕ್ ಸಿಂಗ್ 27, ಹರ್‌ಪ್ರೀತ್ ಬ್ರಾರ್ ಅಜೇಯ 17,ರಾಹುಲ್ ಚಹಾರ್ 16 ರನ್​ ಗಳಿಸಿದರು. ಚೆನ್ನೈ ಪರ ರವೀಂದ್ರ ಜಡೇಜಾ 3, ಸಿಮರ್ಜೀತ್ ಸಿಂಗ್ ಹಾಗೂ ತುಷಾರ್ ದೇಶಪಾಂಡೆ ತಲಾ 2, ಶಾರ್ದೂಲ್ ಠಾಕೂರ್ ಹಾಗೂ ಮಿಚೆಲ್ ಸ್ಯಾಂಟ್ನರ್ ತಲಾ ಒಂದು ವಿಕೆಟ್ ಪಡೆದರು. ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

RELATED ARTICLES

Related Articles

TRENDING ARTICLES