ಮಂಡ್ಯ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದು ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿದ್ದಾರೆ.
ಜಿಲ್ಲೆಯ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಹಾಗು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಘೋಷಣೆ ಕೂಗಿ ರೇವಣ್ಣ ಮತ್ತು ಪ್ರಜ್ವಲ್ ಪ್ರತಿಕೃತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣನ ಬಂಧನವಾಗಬೇಕು, ಸರಿಯಾದ ತನಿಖೆಗೆ ಗುರಿಪಡಿಸಬೇಕು: ಸಂಸದ ಪ್ರಹ್ಲಾದ್ ಜೋಶಿ
ಪ್ರಜ್ವಲ್ ರೇವಣ್ಣ ಸಾವಿರಾರು ಹೆಣ್ಣುಮಕ್ಕಳು ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈ ರೀತಿ ಕೃತ್ಯ ನಡೆಸಿರುವುದು ಹೆಣ್ಣುಕುಲಕ್ಕೆ ಅವಮಾನದ ಸಂಗತಿ, ಇದರ ಬದಲು ಯಾವುದಾದರೂ ಒಂದು ನೀಲಿ ಚಿತ್ರದಲ್ಲಿ ನಟನೆ ಮಾಡಿದ್ರೆ ಆಗುತ್ತಿತ್ತು, ಈ ಕೂಡಲೇ ಪ್ರಜ್ವಲ್ನನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನಾ ನಿರತರು ಘೋಷಣೆ ಕೂಗಿದರು.