Saturday, May 18, 2024

ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ

ಮಂಡ್ಯ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್​ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದು ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿದ್ದಾರೆ.

ಜಿಲ್ಲೆಯ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಿಲ್ಲಾ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಅಂಜನಾ ಶ್ರೀಕಾಂತ್​ ನೇತೃತ್ವದಲ್ಲಿ  ಪ್ರತಿಭಟನೆ ನಡೆಯುತ್ತಿದ್ದು ಹೊಳೆನರಸೀಪುರ ಶಾಸಕ ಹೆಚ್​.ಡಿ ರೇವಣ್ಣ ಹಾಗು ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ದ ಘೋಷಣೆ ಕೂಗಿ ರೇವಣ್ಣ ಮತ್ತು ಪ್ರಜ್ವಲ್​ ಪ್ರತಿಕೃತಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣನ ಬಂಧನವಾಗಬೇಕು, ಸರಿಯಾದ ತನಿಖೆಗೆ ಗುರಿಪಡಿಸಬೇಕು: ಸಂಸದ ಪ್ರಹ್ಲಾದ್​ ಜೋಶಿ

ಪ್ರಜ್ವಲ್​ ರೇವಣ್ಣ ಸಾವಿರಾರು ಹೆಣ್ಣುಮಕ್ಕಳು ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈ ರೀತಿ ಕೃತ್ಯ ನಡೆಸಿರುವುದು ಹೆಣ್ಣುಕುಲಕ್ಕೆ ಅವಮಾನದ ಸಂಗತಿ, ಇದರ ಬದಲು ಯಾವುದಾದರೂ ಒಂದು ನೀಲಿ ಚಿತ್ರದಲ್ಲಿ ನಟನೆ ಮಾಡಿದ್ರೆ ಆಗುತ್ತಿತ್ತು, ಈ ಕೂಡಲೇ ಪ್ರಜ್ವಲ್​ನನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನಾ ನಿರತರು ಘೋಷಣೆ ಕೂಗಿದರು.

RELATED ARTICLES

Related Articles

TRENDING ARTICLES