ಮೈಸೂರು: ವಿದ್ಯುತ್ ತಂತಿ ತುಳಿದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.
ಮೇದಿನಿ ಗ್ರಾಮದ ನಿವಾಸಿ ರಾಚನಾಯಕ (70) ವರ್ಷ, ಮೇತ ದುರ್ದೈವಿ. ಇತ್ತೀಚೆಗೆ ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ನೆನ್ನೆ ಮತ್ತೆ ಗ್ರಾಮದಲ್ಲಿ ಭಾರಿ ಮಳೆಯಾಗಿತ್ತು, ಈ ವೇಳೆ ರಾಚನಾಯಕ ತನ್ನ ಗದ್ದೆಯ ಕಡೆ ಹೋದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಕಿಡಿಗೇಡಿಗಳಿಂದ ಹುಲ್ಲಿನ ಬಣವೆಗೆ ಬೆಂಕಿ: ಅಪಾರ ನಷ್ಟ, ರೈತ ಕಣ್ಣೀರು
ಘಟನಾ ಸ್ಥಳಕ್ಕೆ ತಲಕಾಡು ಪೊಲೀಸರು ಹಾಗು ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.