Saturday, May 18, 2024

ಪ್ರಜ್ವಲ್​ ಈ ಚುನಾವಣೆಯಲ್ಲಿ ಗೆದ್ದರೂ ನಾವು ಅಮಾನತು ಮಾಡ್ತೀವಿ: ಆರ್​. ಅಶೋಕ್​

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಗೆದ್ದರೆ ನಾವು ಎನ್‌ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರಜ್ವಲ್‌ಗೆ ಯಂಗ್ ಲೀಡರ್ ಮತ್ತು ವಿಜನ್ ಲೀಡರ್ ಅಂತ ಹೇಳಿದ್ದರು. ಈಗ ಮಾತಾಡಲಿ, ಅವರೇ ಗೆಲ್ಲಿಸಿದ ಸಂಸದ ಪ್ರಜ್ವಲ್. ಅವರು ಟಿಕೆಟ್ ಕೊಟ್ಟಿದ್ದು 5 ವರ್ಷದ ಅವಧಿಗೆ. ಸಿದ್ದರಾಮಯ್ಯ ಹೇಳಿದಂತೆ ಪ್ರಜ್ವಲ್ ವಿಜನ್ ತೋರಿಸಿದ್ದಾರೆ. ಪ್ರಜ್ವಲ್ ಈಗ ಗೆದ್ದರೆ ನಾವು ಎನ್‌ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಅಶೋಕ್ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಬಂಧನ ಸರಿಯಾಗಿದೆ. ಅವರ ಬಂಧನ ಮಾಡಿದ ಪೊಲೀಸರ ಕಾರ್ಯ ಶ್ಲಾಘಿಸುತ್ತೇನೆ. ಪೊಲೀಸರು ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈಗಾಗಲೇ ಕುಮಾರಸ್ವಾಮಿ ಈ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಜ್ವಲ್ ಕೇಸ್ ರೇವಣ್ಣ ಬಂಧನದಿಂದ ಬಿಜೆಪಿಗೆ ಮುಜುಗರ ಆಗುತ್ತೆ ಅನ್ನೋ ಪ್ರಶ್ನೆ ಬರಲ್ಲ. ಕುಮಾರಸ್ವಾಮಿ ಮತ್ತು ಅಮಿತ್ ಶಾ ಸಹ ಈ ಬಗ್ಗೆ ಮಾತನಾಡಿದ್ದಾರೆ, ಏನು ಮಾತಾಡಿದ್ದಾರೋ ಗೊತ್ತಿಲ್ಲ. ಮೈತ್ರಿ ಕೇಂದ್ರದ ಮಟ್ಟದಲ್ಲಿ ಆಗಿರೋದು. ಮೈತ್ರಿ ಮುಂದುವರಿಸುವ ಬಗ್ಗೆ ವರಿಷ್ಠರೇ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES