ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಇವತ್ತು ಅಥವಾ ನಾಳೆ ಬರುವ ಸಾಧ್ಯತೆ ಇದೆ ಅಂತ ಜೆಡಿಎಸ್ ಮುಖಂಡರೇ ಹೇಳಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿದೆ. ಎಸ್ಐಟಿ ಅದರ ಬಗ್ಗೆ ಗಮನ ಹರಿಸುತ್ತದೆ. ನಾನು ಹೆಚ್ಚು ಪ್ರಸ್ತಾಪ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಎಸ್ ಐಟಿ ರಚನೆ ಬಗ್ಗೆ ಬಿಜೆಪಿಯವರೇ ಸ್ವಾಗತ ಮಾಡಿದ್ದಾರೆ. ಇದನ್ನ ನಾವು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಮಹಿಳಾ ಆಯೋಗ ದೂರಿನ ಮೇಲೆ ಎಸ್ಐಟಿ ರಚನೆಯಾಗಿದೆ. ಆ ಪ್ರಕರಣವನ್ನ ಮುಂದುವರೆಸಲಾಗುತ್ತಿದೆ. ನಿನ್ನೆ ರೇವಣ್ಣನ ಕಸ್ಡಡಿಗೆ ತಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇದು ರಾಜಕೀಯ ಷಡ್ಯಂತ್ರ ಎಂಬ ಹೆಚ್.ಡಿ. ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಹುಶಃ ಇದಕ್ಕಿಂತ ಓಪನ್ ಆಗಿ ರಾಜಕಾರಣ ಬೆರಸದೇ, ಕಾನೂನು ಬದ್ಧನಾಗಿ ಮಾಡುವಂತಹದ್ದು ನಾನು ಎಲ್ಲಿಯೂ ನೋಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಾಗಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಆಗಲಿ, ನಾವಾಗಲಿ ರಾಜಕೀಯ ಬೆರಸುವುದಿಲ್ಲ. ಅದರ ಅವಶ್ಯಕತೆ ನಮಗೆ ಇಲ್ಲ. ನಾವು ರಾಜಕೀಯ ಮಾಡೋದು ಇಲ್ಲ. ನ್ಯಾಯಾಲಯ ಮತ್ತು ತನಿಖೆ ಸಂಸ್ಥೆ ಇವರೆಡರ ಮಧ್ಯೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.