Sunday, May 19, 2024

ಗ್ರಾಮೀಣಾಭಿವೃದ್ದಿ ಸಚಿವರ ಆಪ್ತನ ಮನೆ ಮೇಲೆ ED ದಾಳಿ: 20 ಕೋಟಿಗೂ ಅಧಿಕ ಹಣ ವಶಕ್ಕೆ

ರಾಂಚಿ:  ಜಾರಿ ನಿರ್ದೇಶನಾಲಯ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕೋಟ್ಯಾಂತ ಮೌಲ್ಯದ  ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿದೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ  ಆಲಂಗೀರ್ ಆಲಂ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸದಿಂದ ಸುಮಾರು 20 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ. ಬ್ಯಾಗ್‌, ಕಮೋಡ್‌ಗಳಲ್ಲಿ ಹಣವನ್ನು ಸಂಗ್ರಹಿಸಲಾಗಿತ್ತು. ಹಣ ಎಣಿಕೆ ಕಾರ್ಯ ನಡೆಯುತ್ತಿದೆ. ಸದ್ಯ  ಇಡಿ ತನಿಖೆ ನಡೆಸುತ್ತಿರುವ ವೀರೇಂದ್ರ ಕೆ ರಾಮ್ ಪ್ರಕರಣದ ಹಣ ಇದಾಗಿದೆ ಎಂದು ಇಡಿ ಹೇಳಿದೆ.

 

ಇದನ್ನೂ ಓದಿ: ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭಾ ಚುನಾವಣೆ: ಮತದಾನಕ್ಕೆ ಸಕಲ ಸಿದ್ದತೆ

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಆಗಿದ್ದ ವೀರೇಂದ್ರ ಕೆ ರಾಮ್ ಅವರನ್ನು ಫೆಬ್ರವರಿ 2023 ರಲ್ಲಿ ಇಡಿ ಬಂಧಿಸಿತ್ತು. ಕೆಲವು ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮ ಎಸಗಲು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಇಡಿ ಬಂಧಿಸಿತ್ತು.

ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಹೊಂದಿದ್ದ ಪೆನ್‌ಡ್ರೈವ್‌ ಅನ್ನು ವೀರೇಂದ್ರ ಕೆ ರಾಮ್‌ನಿಂದ ಬಳಿಯಿಂದ ಇಡಿ ಪಡೆದುಕೊಂಡಿದೆ.

RELATED ARTICLES

Related Articles

TRENDING ARTICLES