Sunday, May 19, 2024

ಕಾಂಗ್ರೆಸ್​ ಮಾಜಿ ಶಾಸಕ ಡಾ.ನಾಗರೆಡ್ಡಿ ವಿಧಿವಶ

ಬೆಂಗಳೂರು: ಹೃದಯಾಘಾತದಿಂದ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಡಾ.ನಾಗರೆಡ್ಡಿ ಪಾಟೀಲ್ (79) ಇಂದು ಬೆಳಗಿನ ಜಾವ 3 ಗಂಟೆಗೆ ವಿಧಿವಶರಾಗಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭಾ ಚುನಾವಣೆ: ಮತದಾನಕ್ಕೆ ಸಕಲ ಸಿದ್ದತೆ

ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎಂದೇ ಹೆಸರುವಾಸಿಯಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ನಾಗರೆಡ್ಡಿಯವರ ನಿಧನ ಕಾಂಗ್ರೆಸ್​ಗೆ ಅಪಾರ ನಷ್ಟ ಎನ್ನಲಾಗುತ್ತಿದೆ.

ಸೇಡಂ ಪಟ್ಟಣದಲ್ಲಿರುವ ಡಾ. ನಾಗರೆಡ್ಡಿ ಅವರ ಜಮೀನಿನಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 1983-1985ರ ಅವಧಿಯಲ್ಲಿ ನಾಗರೆಡ್ಡಿ ಪಾಟೀಲ್ ಅವರು, ಕಾಂಗ್ರೆಸ್ ಪರ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES