ಬೀದರ್ : ಲೋಕಸಭಾ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಬೀದರ್ನ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ಬಿಸಿಲಿನ ಝಳದಿಂದಾಗಿ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಬಳಿಕ, ಹೃದಯಾಘಾತವಾಗಿರುವುದು ದೃಢಪಟ್ಟಿದೆ.
ಆನಂದ ಮೃತ ದುರ್ದೈವಿ. ಇವರು ಕೋಡಂಬಲ್ ಚೆಕ್ಪೋಸ್ಟ್ನಲ್ಲಿ SST ತಂಡದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು. ಇನ್ನು ಆನಂದ್ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಸುದ್ದಿ ಓದಿದ್ದೀರಾ? : ನೃತ್ಯ ಮಾಡುವಾಗ ಕುಸಿದು ಬಿದ್ದು ಯುವತಿ ಸಾವು : ಇಲ್ಲಿದೆ ಆಘಾತಕಾರಿ ವಿಡಿಯೋ
ಲೋಕಸಭೆ ಚುನಾವಣೆ ಹಿನ್ನೆಲೆ ಚೆಕ್ಪೋಸ್ಟ್ನಲ್ಲಿ ಬೆಳಗ್ಗೆ 8 ರಿಂದ ಮದ್ಯಾಹ್ನ 3 ಗಂಟೆವರೆಗಿನ ಶಿಪ್ಟ್ನಲ್ಲಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ವಾಂತಿಯಾಗಿದ್ದು, ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡಲಾಗಿದೆ. ಆದರೆ, ದುರಾದೃಷ್ಟವಶಾತ್ ಮಾರ್ಗ ಮಧ್ಯೆ ಅಧಿಕಾರಿ ಮೃತಪಟ್ಟಿದ್ದಾರೆ.