ಉಡುಪಿ : ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಬೈಂದೂರು ತಾಲೂಕಿನ ಹುಟ್ಟೂರು ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.
ಬಳಿಕ ಮಾತನಾಡಿದ ಅವರು, ಕಾಂತಾರ 1 ಚಿತ್ರದ ಬಗ್ಗೆ ಕೆಲವು ಅಪ್ಡೇಟ್ ನೀಡಿದರು. ಕಾಂತಾರ 1 ಚಿತ್ರಕ್ಕಾಗಿ ಒಂದು ವರ್ಷದಿಂದ ಗಡ್ಡ, ಕೂದಲು ಬಿಟ್ಟಿದ್ದೇನೆ ಎಂದು ಹೇಳಿದರು.
ಈಗಾಗಲೇ ಚಿತ್ರೀಕರಣ ಆರಂಭವಾಗಿದೆ. ಶೂಟಿಂಗ್ ಬಹಳ ಚೆನ್ನಾಗಿ ನಡೆಯುತ್ತಿದೆ. ನಾವು ಅಂದುಕೊಂಡಂತೆ ಕೆಲಸ ನಡೆಯುತ್ತಿದೆ. ಮೊದಲಿಗಿಂತ ದೊಡ್ಡ ಜವಾಬ್ದಾರಿ ಇದೆ, ದೊಡ್ಡ ತಂಡ ಕೆಲಸ ಮಾಡುತ್ತಿದೆ. ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್ಗೆ ಒಂದು ಪುಣ್ಯ. ಅದ್ಭುತವಾದ ಟೆಕ್ನಿಷಿಯನ್ಸ್ ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರ, ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ತಿಳಿಸಿದರು.
ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಬಾಯಲ್ಲಿ ಏನು ಹೇಳಲ್ಲ. ಕೆಲಸ ಮೂಲಕ ಮಾಡಿ ತೋರಿಸಬೇಕು ಅಂತ ಅಂದುಕೊಂಡಿದ್ದೇನೆ. ಯಾವುದೇ ಒತ್ತಡವು ಇಲ್ಲ, ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಒಂದು ಕಲಿಯುವ ಪ್ರೊಸೆಸ್, ಅದನ್ನು ಮಾಡುತ್ತಿದ್ದೇನೆ. ಸಿನಿಮಾಗೋಸ್ಕರ ಒಂದು ವರ್ಷದಿಂದ ಗಡ್ಡ ಕೂದಲು ಬಿಟ್ಟಿದ್ದೇನೆ ಎಂದು ಹೇಳಿದರು.
ಕರಾವಳಿ ಭಾಗದಲ್ಲಿ ಸಂಪೂರ್ಣ ಚಿತ್ರೀಕರಣ
ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಸೆಟ್ ವರ್ಕ್ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ. ಅಂತೆ ಕಂತೆಗಳ ಸುದ್ದಿ ಬಹಳಷ್ಟು ಹರಿದಾಡುತ್ತಿದೆ. ಚಿತ್ರದ ಬಗ್ಗೆ ಜನಕ್ಕೆ ನಿರೀಕ್ಷೆ ಹೋಗಬಾರದು. ಚಿತ್ರ ತೆರೆಗೆ ಬರುವ ತನಕ ಗೌಪ್ಯತೆ ಕಾಪಾಡಬೇಕು ಜನಕ್ಕೆ ಕುತೂಹಲ ಇರಬೇಕು. ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ತಿಳಿಸಿದರು.
ಚಿತ್ರವನ್ನು ಥಿಯೇಟ್ನಲ್ಲಿ ನೋಡಿದ್ರೆ ಒಳ್ಳೆಯದು
ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಇತ್ತೀಚಿನ ದಿನದಲ್ಲಿ ನ್ಯೂಸ್ ಚಾನೆಲ್ನಲ್ಲಿ ಹೆಚ್ಚು ಸಿನಿಮಾದ ಬಗ್ಗೆ ನೋಡುತ್ತಿದ್ದಾರೆ. ಅಧಿಕೃತವಾಗಿ ಹೊಂಬಾಳೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಕಥೆನೂ ನ್ಯೂಸ್ ಚಾನೆಲ್ನಲ್ಲಿ ಹೇಳಿದರೆ ಕಷ್ಟ ಎಂದು ಬೇಸರಿಸಿದರು.