ಚಾಮರಾಜನಗರ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಂಗನಲ್ಲೂರು ಬಳಿ ನಡೆದಿದೆ.
ಸಿಂಗನಲ್ಲೂರು ಗ್ರಾಮದ ಶ್ರೀಧರ್ (44) ಸಾವನ್ನಪ್ಪಿರುವ ದುರ್ದೈವಿ. ಮೃತ ಶ್ರೀಧರ್ ಹನೂರು ಪಟ್ಟಣದಲ್ಲಿ ಬಾಳೆಹಣ್ಣು ವ್ಯಾಪಾರ ಮಾಡಿಕೊಂಡಿದ್ದರು.
ಇಂದು ಬೆಳಗ್ಗೆ ಕಾಮಗೆರೆ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಈ ವೇಳೆ ಯಮನಂತೆ ಬಂದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ನಡಿ ಸಿಲುಕಿ ಬೈಕ್ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಹನೂರು ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ಮನೆಗೆ ಆಧಾರವಾಗಿದ್ದ ಶ್ರೀಧರ್ ಅವರನ್ನು ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.