Monday, May 20, 2024

ಆಸ್ತಿ ವಿಚಾರಕ್ಕೆ ಜಗಳ : ಮನನೊಂದು ಅಣ್ಣ ಆತ್ಮಹತ್ಯೆಗೆ ಶರಣು

ಹಾವೇರಿ : ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ.

ನಾಗರಾಜ ಕೋಟಿಗಾಳರ (36) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತ ನಾಗರಾಜ ಶವ ಪತ್ತೆಯಾಗಿದೆ.

ಆಸ್ತಿ ಮಾರಾಟದ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಜಗಳವಾಗಿತ್ತು. ಈ ಘಟನೆಯಿಂದ ನಾಗರಾಜ ಬೇಸತ್ತಿದ್ದರು. ಅಲ್ಲದೇ, ದುಡುಕಿನ ನಿರ್ಧಾರ ಕೈಗೊಂಡು ಅಣ್ಣ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾಲ ತೀರಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದ ನಾಗರಾಜ ನೇಣು ಹಾಕಿಕೊಂಡಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES