Monday, May 20, 2024

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಹಾಡಹಗಲೇ ಡಬಲ್ ಮರ್ಡರ್!

ಶಿವಮೊಗ್ಗ : ಲೋಕಸಭಾ ಚುನಾವಣೆ ಮತದಾನ ಮುಗಿದ ಮಾರನೇ ದಿನವೇ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಜೋಡಿ ಕೊಲೆ ನಡೆದಿದೆ.

ಇಳಿ ಸಂಜೆಯಲ್ಲಿ ಗ್ಯಾಂಗ್ ವಾರ್ ನಡೆದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಅನ್ಯಕೋಮಿನ ಇಬ್ಬರು ಯುವಕರನ್ನು ಹತ್ಯೆ ಮಾಡಲಾಗಿದೆ. ಮೀನು ಮತ್ತು ಮಾಂಸ ಮಾರುಕಟ್ಟೆ ಬಳಿಯೇ ನೆತ್ತರು ಹರಿದಿದ್ದು, ಘಟನೆಯಿಂದ ಇಡೀ ಶಿವಮೊಗ್ಗ ಬೆಚ್ಚಿಬಿದ್ದಿದೆ.

ಗೌಸ್ ಮತ್ತು ಶೋಹೆಬ್ ಕೊಲೆಯಾದ ವ್ಯಕ್ತಿಗಳು. ಹಳೆಯ ವೈಷಮ್ಯ ಹಿನ್ನೆಲೆ ಇಬ್ಬರ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಮೃತ ರೌಡಿ ಶೀಟರ್​ಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES