Monday, May 20, 2024

ಸಿಲಿಕಾನ್ ಸಿಟಿಯಲ್ಲಿ ಮಳೆ: ವ್ಯಕ್ತಿಯ ಮೇಲೆ ಬಿದ್ದ ಮರ, ಸೊಂಟ ಮುರಿದುಕೊಂಡ ಟೆಕ್ಕಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆಗೆ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿ ಬೆನ್ನು ಮೂಳೆ ಮುರಿದುಕೊಂಡಿರುವ ಘಟನೆ ನಡೆದಿದೆ.

ಐಟಿ ಕಂಪೆನಿ ಉದ್ಯೋಗಿಯಾಗಿದ್ದ 26 ವರ್ಷದ ರವಿಕುಮಾರ್ ಗಾಯಾಳು, ಸದ್ಯ ಗಾಯಾಳುವನ್ನು HALನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸಿಲಿಕಾನ್ ಸಿಟಿಯ ಸಿ.ವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ರವಿಕುಮಾರ್ ಸ್ಪೈನಲ್​ ಕಾರ್ಡ್​ ಮುರಿದುಕೊಂಡಿದ್ದಾರೆ. ಸದ್ಯ ಬಿಬಿಎಂಪಿ ಉಸ್ತುವಾರಿಯಲ್ಲಿ ಗಾಯಾಳು ರವಿಕುಮಾರ್​ಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

RELATED ARTICLES

Related Articles

TRENDING ARTICLES