Monday, May 20, 2024

KSRTC ಬಸ್​ ಮತ್ತು ಮೊಪೆಡ್​ ನಡುವೆ ಅಪಘಾತ: ಮೊಪೆಡ್​ ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಮೊಪೆಡ್ ನಡುವೆ ಅಪಘಾತ ಸಂಭವಿಸಿ, ಮೊಪಡ್ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ಹೊಸಹಳ್ಳಿ ರಸ್ತೆಯ ಮಾಕಳಿ ಬೆಟ್ಟದ ಸಾಲಿನ ದೊಡ್ಡಹಳ್ಳದ ಬಳಿ ಸಂಭವಿಸಿದೆ.

ದೊಡ್ಡಬಳ್ಳಾಪುರದಿಂದ ಗೊರವನಹಳ್ಳಿಗೆ ತೆರಳುತ್ತಿದ್ದ KSRTC ಬಸ್ ಹಾಗೂ ದೊಡ್ಡಬಳ್ಳಾಪುರದಿಂದ ಗುಂಡಮಗೆರೆ ಗ್ರಾಮದಲ್ಲಿ ಪೇಂಟಿಂಗ್ ಕೆಲಸಕ್ಕೆ ತೆರಳುತ್ತಿದ್ದ ಮುನಿಯಪ್ಪ ಅವರ ಮೊಪೆಡ್‌ಗೆ ನಡುವೆ ಅಪಘಾತ ಸಂಭವಿಸಿ, ಮೊಪೆಡ್ ಬಸ್ಸಿನ ಕೆಳಗೆ ಸಿಲುಕಿದೆ.

ಹೊಸಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ದೇವಸ್ಥಾನ ಗಂಟೆಯಿಂದ ತಪ್ಪಿತು ಭಾರಿ ಅನಾಹುತ

KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ:

ರಾಮನಗರ: KSRTC ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಟೋಲ್ ಬಳಿ ನಡೆದಿದೆ.

ಇಂದು ಬೆ.8:30ಕ್ಕೆ ಕನಕಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು ಕಗ್ಗಲೀಪುರ ವ್ಯಾಪ್ತಿಯ ಸೋಮನಹಳ್ಳಿ ಟೋಲ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಬಸ್ಸು ಕನಕಪುರ ಡಿಪೋಗೆ ಸೇರಿದ್ದು ಎನ್ನಲಾಗಿದೆ. ಬಸ್ ಪಲ್ಟಿ ಪರಿಣಾಮ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES